ಹೊಸದಿಲ್ಲಿ : ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಪ್ರಮುಖ ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್ಎಸ್ಎಸ್ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿಕಾಸ್ ಪಟೇಲ್ ಅವರನ್ನು ಸೋಲಿಸಿವೆ.
ಅಖಿಲ ಭಾರತ ವಿದ್ಯಾರ್ಥಿಗಳ ಅಸೋಸಿಯೇಷನ್ (ಎಐಎಸ್ಎ), ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ಎಫ್) ಸಂಘಟನೆಳು ಎಡ ಒಕ್ಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿವೆ.
ಇದನ್ನೂ ಓದಿ:-ಮೈಸೂರು : ಸೆಸ್ಕ್ನಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ
ಎಬಿವಿಪಿಯ ವಿಕಾಸ್ ಪಟೇಲ್ ಅವರನ್ನು 449 ಮತಗಳಿಂದ ಸೋಲಿಸಿ ಅದಿತಿ ಮಿಶ್ರಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರ ಸ್ಥಾನಕ್ಕೆ ಗೋಪಿಕಾ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡ್ಯಾನಿಶ್ ಅಲಿ ಗೆಲುವು ಸಾಧಿಸಿದ್ದಾರೆ.
ಎಡ ಒಕ್ಕೂಟದ ಪ್ರಬಲ ಪ್ರಚಾರ, ವಿದ್ಯಾರ್ಥಿ ಹಕ್ಕುಗಳ ಕುರಿತು ಘೋಷಣೆಗಳು ಹಾಗೂ ಕ್ಯಾಂಪಸ್ನಲ್ಲಿ ನಡೆದ ಚರ್ಚೆಗಳು ಚುನಾವಣಾ ಹೋರಾಟಕ್ಕೆ ಮೆರಗು ನೀಡಿತ್ತು. ಫಲಿತಾಂಶ ಬಳಿಕ ಎಡ ಒಕ್ಕೂಟದ ವಿದ್ಯಾರ್ಥಿಗಳು ಜೆಎನ್ಯು ಮತ್ತೆ ಕೆಂಪಾಗಿದೆ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…