ಹೊಸದಿಲ್ಲಿ : ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಪ್ರಮುಖ ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್ಎಸ್ಎಸ್ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ವಿಕಾಸ್ ಪಟೇಲ್ ಅವರನ್ನು ಸೋಲಿಸಿವೆ.
ಅಖಿಲ ಭಾರತ ವಿದ್ಯಾರ್ಥಿಗಳ ಅಸೋಸಿಯೇಷನ್ (ಎಐಎಸ್ಎ), ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್ಐ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಷನ್ (ಡಿಎಸ್ಎಫ್) ಸಂಘಟನೆಳು ಎಡ ಒಕ್ಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿವೆ.
ಇದನ್ನೂ ಓದಿ:-ಮೈಸೂರು : ಸೆಸ್ಕ್ನಿಂದ ವಿದ್ಯುತ್ ಬಿಲ್ ಬಾಕಿ ವಸೂಲಾತಿ ಅಭಿಯಾನ
ಎಬಿವಿಪಿಯ ವಿಕಾಸ್ ಪಟೇಲ್ ಅವರನ್ನು 449 ಮತಗಳಿಂದ ಸೋಲಿಸಿ ಅದಿತಿ ಮಿಶ್ರಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರ ಸ್ಥಾನಕ್ಕೆ ಗೋಪಿಕಾ ಬಾಬು, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಯಾದವ್, ಜಂಟಿ ಕಾರ್ಯದರ್ಶಿಯಾಗಿ ಡ್ಯಾನಿಶ್ ಅಲಿ ಗೆಲುವು ಸಾಧಿಸಿದ್ದಾರೆ.
ಎಡ ಒಕ್ಕೂಟದ ಪ್ರಬಲ ಪ್ರಚಾರ, ವಿದ್ಯಾರ್ಥಿ ಹಕ್ಕುಗಳ ಕುರಿತು ಘೋಷಣೆಗಳು ಹಾಗೂ ಕ್ಯಾಂಪಸ್ನಲ್ಲಿ ನಡೆದ ಚರ್ಚೆಗಳು ಚುನಾವಣಾ ಹೋರಾಟಕ್ಕೆ ಮೆರಗು ನೀಡಿತ್ತು. ಫಲಿತಾಂಶ ಬಳಿಕ ಎಡ ಒಕ್ಕೂಟದ ವಿದ್ಯಾರ್ಥಿಗಳು ಜೆಎನ್ಯು ಮತ್ತೆ ಕೆಂಪಾಗಿದೆ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…