ದೇಶ- ವಿದೇಶ

JOB ALERTS :ಗುಪ್ತಚರ ಇಲಾಖೆಯಲ್ಲಿ ನೇಮಕಾತಿ

ಹೊಸದಿಲ್ಲಿ : ಭಾರತ ಗೃಹ ಸಚಿವಾಲಯದ ಗುಪ್ತಚರ ಬ್ಯೂರೋ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಅಧಿಸೂಚನೆಯಡಿಯಲ್ಲಿ, ಒಟ್ಟು 3,717 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II/ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಸಂಬಳ, ಅರ್ಜಿ ಪ್ರಕ್ರಿಯೆ ಇತ್ಯಾದಿಗಳ ವಿವರಗಳೊಂದಿಗೆ ಸಂಪೂರ್ಣ ಅಧಿಸೂಚನೆಯನ್ನು ಜುಲೈ 19 ರಂದು IB ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ವರ್ಗವಾರು ಖಾಲಿ ಹುದ್ದೆಗಳ ವಿವರಗಳು:
ಸಾಮಾನ್ಯ (UR) ವರ್ಗದ ಹುದ್ದೆಗಳ ಸಂಖ್ಯೆ: 1,537.
ಒಬಿಸಿ ವರ್ಗದ ಹುದ್ದೆಗಳ ಸಂಖ್ಯೆ: 946.
SC ವಿಭಾಗದಲ್ಲಿ ಹುದ್ದೆಗಳ ಸಂಖ್ಯೆ: 566.
ಎಸ್‌ಟಿ ವಿಭಾಗದಲ್ಲಿ ಹುದ್ದೆಗಳ ಸಂಖ್ಯೆ: 226.
ಇಡಬ್ಲ್ಯೂಎಸ್ ವಿಭಾಗದಲ್ಲಿನ ಹುದ್ದೆಗಳ ಸಂಖ್ಯೆ: 442.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕಂಪ್ಯೂಟರ್ ಕೌಶಲ್ಯವನ್ನು ಸಹ ಹೊಂದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷದಿಂದ 27 ವರ್ಷಗಳ ನಡುವೆ ಇರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಮೀಸಲು ವರ್ಗಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ಜುಲೈ 19 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳಲ್ಲಿ ನಡೆಯಲಿದೆ. ಟೈಯರ್ -1 ಪರೀಕ್ಷೆ (ವಸ್ತುನಿಷ್ಠ ಪ್ರಕಾರ), ಟೈಯರ್ -2 (ವಿವರಣಾತ್ಮಕ ಪ್ರಕಾರ) ಮತ್ತು ಸಂದರ್ಶನ ಇರುತ್ತದೆ. ಈ ಮೂರು ಹಂತಗಳಲ್ಲಿ ಅರ್ಹತೆ ಪಡೆದವರಿಗೆ ಗುಪ್ತಚರ ಬ್ಯೂರೋದಲ್ಲಿ ಉದ್ಯೋಗಾವಕಾಶ ಸಿಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 44,900 ರಿಂದ ರೂ. 1,42,400 ರವರೆಗೆ ವೇತನ ನೀಡಲಾಗುತ್ತದೆ. ಇತರ ಭತ್ಯೆಗಳು ಮತ್ತು ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ. ಇತರ ವಿವರಗಳಿಗಾಗಿ, ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

7 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

7 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

7 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

8 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

9 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

9 hours ago