ದೇಶ- ವಿದೇಶ

JOB ALERTS :ಗುಪ್ತಚರ ಇಲಾಖೆಯಲ್ಲಿ ನೇಮಕಾತಿ

ಹೊಸದಿಲ್ಲಿ : ಭಾರತ ಗೃಹ ಸಚಿವಾಲಯದ ಗುಪ್ತಚರ ಬ್ಯೂರೋ ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಈ ಅಧಿಸೂಚನೆಯಡಿಯಲ್ಲಿ, ಒಟ್ಟು 3,717 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್–II/ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಸಂಬಳ, ಅರ್ಜಿ ಪ್ರಕ್ರಿಯೆ ಇತ್ಯಾದಿಗಳ ವಿವರಗಳೊಂದಿಗೆ ಸಂಪೂರ್ಣ ಅಧಿಸೂಚನೆಯನ್ನು ಜುಲೈ 19 ರಂದು IB ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ವರ್ಗವಾರು ಖಾಲಿ ಹುದ್ದೆಗಳ ವಿವರಗಳು:
ಸಾಮಾನ್ಯ (UR) ವರ್ಗದ ಹುದ್ದೆಗಳ ಸಂಖ್ಯೆ: 1,537.
ಒಬಿಸಿ ವರ್ಗದ ಹುದ್ದೆಗಳ ಸಂಖ್ಯೆ: 946.
SC ವಿಭಾಗದಲ್ಲಿ ಹುದ್ದೆಗಳ ಸಂಖ್ಯೆ: 566.
ಎಸ್‌ಟಿ ವಿಭಾಗದಲ್ಲಿ ಹುದ್ದೆಗಳ ಸಂಖ್ಯೆ: 226.
ಇಡಬ್ಲ್ಯೂಎಸ್ ವಿಭಾಗದಲ್ಲಿನ ಹುದ್ದೆಗಳ ಸಂಖ್ಯೆ: 442.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕಂಪ್ಯೂಟರ್ ಕೌಶಲ್ಯವನ್ನು ಸಹ ಹೊಂದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷದಿಂದ 27 ವರ್ಷಗಳ ನಡುವೆ ಇರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಮೀಸಲು ವರ್ಗಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಆಸಕ್ತ ಅಭ್ಯರ್ಥಿಗಳು ಜುಲೈ 19 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳಲ್ಲಿ ನಡೆಯಲಿದೆ. ಟೈಯರ್ -1 ಪರೀಕ್ಷೆ (ವಸ್ತುನಿಷ್ಠ ಪ್ರಕಾರ), ಟೈಯರ್ -2 (ವಿವರಣಾತ್ಮಕ ಪ್ರಕಾರ) ಮತ್ತು ಸಂದರ್ಶನ ಇರುತ್ತದೆ. ಈ ಮೂರು ಹಂತಗಳಲ್ಲಿ ಅರ್ಹತೆ ಪಡೆದವರಿಗೆ ಗುಪ್ತಚರ ಬ್ಯೂರೋದಲ್ಲಿ ಉದ್ಯೋಗಾವಕಾಶ ಸಿಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 44,900 ರಿಂದ ರೂ. 1,42,400 ರವರೆಗೆ ವೇತನ ನೀಡಲಾಗುತ್ತದೆ. ಇತರ ಭತ್ಯೆಗಳು ಮತ್ತು ಸೌಲಭ್ಯಗಳನ್ನು ಸಹ ಒದಗಿಸಲಾಗುತ್ತದೆ. ಇತರ ವಿವರಗಳಿಗಾಗಿ, ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

57 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

59 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago