ದೇಶ- ವಿದೇಶ

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 10 ಜನರು ಗಾಯಗೊಂಡಿದ್ದಾರೆ.

ಜೋಹಾನ್ಸ್‌ಬರ್ಗ್‌ನಿಂದ ಸುಮಾರು 40 ಕಿಮೀ ದೂರದಲ್ಲಿರುವ ಬೆಕರ್ಸ್‌ಡಾಲ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ. ಯಾವುದೇ ಸುಳಿವಿಲ್ಲದಂತೆ ಮದ್ಯದಂಗಡಿಗೆ ನುಗ್ಗಿದ ಬಂದೂಕುಧಾರಿಗಳು ಏಕಾಏಕಿ ಜನಸಮೂಹದ ಮೇಲೆ ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.

ಘಟನೆ ಬಳಿಕ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಗಾಯಾಳುಗಳನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ನಂತರ ತನಿಖೆ ಆರಂಭಿಸಿದ್ದು, ಈವರೆಗೆ ಯಾವುದೇ ಶಂಕಿತರನ್ನ ಗುರುತಿಸಲಾಗಿಲ್ಲ ಎಂದು ಹೇಳಿದ್ದಾರೆ.

ಘಟನೆ ಕುರಿತು ಗೌಟೆಂಗ್ ಪ್ರಾಂತ್ಯದ ಪೊಲೀಸ್ ವಕ್ತಾರ ಬ್ರೆಂಡಾ ಮುರಿಡಿಲಿ ಮಾತನಾಡಿ, ಗುಂಡಿನ ದಾಳಿ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ. ಸದ್ಯಕ್ಕೆ ಮೃತರ ವಿವರಗಳನ್ನ ಕಲೆಹಾಕಲಾಗುತ್ತಿದೆ. ಜೊತೆಗೆ ದಾಳಿ ನಡೆದ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಈ ದಾಳಿಯು ಭೀತಿ ಮತ್ತು ಅವ್ಯವಸ್ಥೆಗೆ ಕಾರಣವಾಗಿದೆ. ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಇದರಿಂದ ಹಲವು ಸಾವು ನೋವುಗಳು ಸಂಭವಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

15 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

15 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

15 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

15 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

15 hours ago