ರಾಯ್ಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಸೆಪ್ಟಿಕ್ ಟ್ಯಾಂಕ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿ ಸಂಘರ್ಷದ ಕುರಿತು ಪತ್ರಕರ್ತ ಮುಖೇಶ್ ವರದಿ ಮಾಡಿ ಮನ್ನಣೆ ಗಳಿಸಿದ್ದರು.
ಚಂದ್ರಕರ್ ಹೆದ್ದಾರಿ ಯೋಜನೆಯಲ್ಲಿನ ಹಗರಣದ ಕುರಿತು ಇತ್ತೀಚೆಗೆ ವರದಿಯನ್ನು ಮಾಡಿದ್ದರು. ಹೆದ್ದಾರಿ ಯೋಜನೆಯಲ್ಲಿನ ಹಗರಣವನ್ನು ಬಹಿರಂಗಪಡಿಸಿದ್ದಕ್ಕಾಗಿ ಅವರಿಗೆ ಬೆದರಿಕೆ ಕರೆ ಬಂದಿತ್ತು ಎಂದು ಮೃತ ಪತ್ರಕರ್ತನ ಕುಟುಂಬ ಆರೋಪಿಸಿದೆ.
ಜ.1ರಂದು ಮನೆಯಿಂದ ತೆರಳಿದ್ದ ಮುಖೇಶ್ ಚಂದ್ರಕರ್ ಆ ಬಳಿಕ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಅವರು ಮನೆಗೆ ವಾಪಸ್ಸಾಗದಿದ್ದಾಗ ಅವರ ಸಹೋದರ ಯುಕೇಶ್ ಪೊಲೀಸರಿಗೆ ನಾಪತ್ತೆ ಬಗ್ಗೆ ದೂರು ನೀಡಿದ್ದರು.
ಮುಕೇಶ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಮನೆಯ ಅಂಗಳದಲ್ಲಿ ಕೊನೆಯ ಬಾರಿಗೆ ಅವರ ಮೊಬೈಲ್ ನೆಟ್ವರ್ಕ್ ತೋರಿಸಿತ್ತು. ಸ್ಥಳಕ್ಕೆ ತೆರಳಿ ಹೆಚ್ಚಿನ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಸೆಪ್ಟಿಕ್ ಟ್ಯಾಂಕ್ನಲ್ಲಿ ಮುಕೇಶ್ ಅವರ ಮೃತದೇಹ ಪತ್ತೆಯಾಗಿತ್ತು. ಮುಕೇಶ್ ಅವರ ಮೃತದೇಹವು ಊದಿಕೊಂಡಿದ್ದು, ತಲೆ ಮತ್ತು ಬೆನ್ನಿನ ಮೇಲೆ ಗಾಯಗಳು ಕಂಡು ಬಂದಿದೆ. ಮುಖೇಶ್ ಧರಿಸಿದ್ದ ಬಟ್ಟೆಯಿಂದ ಮೃತದೇಹವನ್ನು ಗುರುತಿಸಲಾಗಿದೆ.
ಮುಖೇಶ್ ಚಂದ್ರಕರ್ ಅವರು 1.59 ಲಕ್ಷ ಚಂದಾದಾರರನ್ನು ಹೊಂದಿದ್ದ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಬಸ್ತಾರ್ ಪ್ರದೇಶದಲ್ಲಿನ ನಿರ್ಣಾಯಕ ಸಮಸ್ಯೆಗಳ ಬಗ್ಗೆ ಅವರು ವರದಿ ಮಾಡುತ್ತಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…