ದೇಶ- ವಿದೇಶ

ಭ್ರಷ್ಟಾಚಾರ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಪತ್ರಕರ್ತ ಸಾವು: ಕೊಲೆ ಮಾಡಿರುವ ಶಂಕೆ

ರಾಯ್ಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿ ಸಂಘರ್ಷದ ಕುರಿತು ಪತ್ರಕರ್ತ ಮುಖೇಶ್ ವರದಿ ಮಾಡಿ ಮನ್ನಣೆ ಗಳಿಸಿದ್ದರು.

ಚಂದ್ರಕರ್ ಹೆದ್ದಾರಿ ಯೋಜನೆಯಲ್ಲಿನ ಹಗರಣದ ಕುರಿತು ಇತ್ತೀಚೆಗೆ ವರದಿಯನ್ನು ಮಾಡಿದ್ದರು. ಹೆದ್ದಾರಿ ಯೋಜನೆಯಲ್ಲಿನ ಹಗರಣವನ್ನು ಬಹಿರಂಗಪಡಿಸಿದ್ದಕ್ಕಾಗಿ ಅವರಿಗೆ ಬೆದರಿಕೆ ಕರೆ ಬಂದಿತ್ತು ಎಂದು ಮೃತ ಪತ್ರಕರ್ತನ ಕುಟುಂಬ ಆರೋಪಿಸಿದೆ.

ಜ.1ರಂದು ಮನೆಯಿಂದ ತೆರಳಿದ್ದ ಮುಖೇಶ್ ಚಂದ್ರಕರ್ ಆ ಬಳಿಕ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಅವರು ಮನೆಗೆ ವಾಪಸ್ಸಾಗದಿದ್ದಾಗ ಅವರ ಸಹೋದರ ಯುಕೇಶ್ ಪೊಲೀಸರಿಗೆ ನಾಪತ್ತೆ ಬಗ್ಗೆ ದೂರು ನೀಡಿದ್ದರು.

ಮುಕೇಶ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಗುತ್ತಿಗೆದಾರ ಸುರೇಶ್ ಚಂದ್ರಕರ್ ಅವರ ಮನೆಯ ಅಂಗಳದಲ್ಲಿ ಕೊನೆಯ ಬಾರಿಗೆ ಅವರ ಮೊಬೈಲ್ ನೆಟ್‌ವರ್ಕ್ ತೋರಿಸಿತ್ತು. ಸ್ಥಳಕ್ಕೆ ತೆರಳಿ ಹೆಚ್ಚಿನ ಪರಿಶೀಲನೆ ನಡೆಸಿದಾಗ ಪೊಲೀಸರಿಗೆ ಸೆಪ್ಟಿಕ್ ಟ್ಯಾಂಕ್ನಲ್ಲಿ ಮುಕೇಶ್ ಅವರ ಮೃತದೇಹ ಪತ್ತೆಯಾಗಿತ್ತು. ಮುಕೇಶ್ ಅವರ ಮೃತದೇಹವು ಊದಿಕೊಂಡಿದ್ದು, ತಲೆ ಮತ್ತು ಬೆನ್ನಿನ ಮೇಲೆ ಗಾಯಗಳು ಕಂಡು ಬಂದಿದೆ. ಮುಖೇಶ್ ಧರಿಸಿದ್ದ ಬಟ್ಟೆಯಿಂದ ಮೃತದೇಹವನ್ನು ಗುರುತಿಸಲಾಗಿದೆ.

ಮುಖೇಶ್ ಚಂದ್ರಕರ್ ಅವರು 1.59 ಲಕ್ಷ ಚಂದಾದಾರರನ್ನು ಹೊಂದಿದ್ದ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಬಸ್ತಾರ್ ಪ್ರದೇಶದಲ್ಲಿನ ನಿರ್ಣಾಯಕ ಸಮಸ್ಯೆಗಳ ಬಗ್ಗೆ ಅವರು ವರದಿ ಮಾಡುತ್ತಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

15 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago