ದೇಶ- ವಿದೇಶ

ಜಾಯ್‌ ಐಸ್‌ಕ್ರೀಮ್ ಭೂ ವಿವಾದ: 3.23 ಎಕರೆ ಭೂಮಿ ಪ್ರೆಸ್ಟೀಜ್‌ ಎಸ್ಟೇಟ್‌ಗೆ ಸೇರಿದೆ: ವಿಭಾಗೀಯ ಪೀಠದ ಸ್ಪಷ್ಟೋಕ್ತಿ

ಬೆಂಗಳೂರು: ಕೃಷ್ಣರಾಜಪುರ ಹೋಬಳಿಯ ಪಟ್ಟಂದೂರ ಅಗ್ರಹಾರದಲ್ಲಿನ 3.23 ಎಕರೆ ಭೂಮಿಯು ಪ್ರತಿಷ್ಠಿತ ಪ್ರೆಸ್ಟೀಜ್‌ ಎಸ್ಟೇಟ್‌ ಪ್ರಾಜೆಕ್ಟ್‌ ಲಿಮಿಟೆಡ್‌ಗೆ ಸೇರಿದೆ ಎಂದು ಆದೇಶ ಮಾಡಿದ್ದ‌ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠವು ಎತ್ತಿ ಹಿಡಿದಿದೆ.

ರಾಜ್ಯ ಸರ್ಕಾರ ಮತ್ತು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ಮಾಡಿದೆ.

“ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಒಂದೊಮ್ಮೆ ಭೂಮಿ ಹಂಚಿಕೆ ಮಾಡಿದ್ದರೆ ಕರ್ನಾಟಕ ಭೂಮಿ ಮಂಜೂರು ನಿಯಮಗಳ ಅಡಿ ಭೂಮಿ ಪರಭಾರೆ (ನಾನ್‌ ಏಲಿಯನೇಷನ್) ಮಾಡದಿರುವ ಷರತ್ತು ಅನ್ವಯಿಸುವುದಿಲ್ಲ” ಎಂದು ಪೀಠ ಹೇಳಿದೆ.

“ರಾಜ್ಯ ಸರ್ಕಾರದ ಅನುಮತಿ ಪಡೆದು ಕೆಐಎಡಿಬಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹೀಗಾಗಿ, ಕೆಐಎಡಿಬಿ ನಿಯಮ 20(1)(ಸಿ)ಗೆ ವಿರುದ್ಧವಾಗಿ ಭೂಮಿ ಹಂಚಿಕೆ ಮಾಡಲಾಗಿದೆ ಎಂಬ ವಾದವನ್ನು ಒಪ್ಪಲಾಗದು” ಎಂದು ನ್ಯಾಯಾಲಯ ಹೇಳಿದೆ ಹೇಳಿದೆ.

“ಕೆಐಎಡಿಬಿಗೆ ಭೂಮಿ ಹಂಚಿಕೆ ಮಾಡಿರುವುದಕ್ಕೆ ಭೂಮಿ ಪರಭಾರೆ ಷರತ್ತು ಅನ್ವಯಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಲಿ ಪ್ರಕರಣದಲ್ಲಿ ಕರ್ನಾಟಕ ಸರ್ಕಾರವು ಕೆಐಎಡಿಬಿಗೆ ಭೂಮಿ ಹಂಚಿಕೆ ಮಾಡಿದೆ. ನಿಯಮದ 28(2) ಉಪಬಂಧದ ಅಡಿ ಭೂಮಿ ಪರಭಾರೆ ಷರತ್ತನ್ನು ಕರ್ನಾಟಕ ಸರ್ಕಾರವು ಸರಿಯಾಗಿ ಅನ್ವಯಿಸಿಲ್ಲ. ಹೀಗಾಗಿ, 2006 ಮಾರ್ಚ್‌ 31ರ ಮೆಮೊ ಮೂಲಕ ಜಿಲ್ಲಾಧಿಕಾರಿಯು ನಿಯಮ ಅನ್ವಯಿಸಬಾರದಿತ್ತು” ಎಂದು ಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಜಾಯ್‌ ಐಸ್‌ಕ್ರೀಮ್ಸ್‌ ಪ್ರೈವೇಟ್‌ ಲಿಮಿಟೆಡ್‌ ಭೂಮಿಯ ಮಾಲೀಕತ್ವ ಹೊಂದಿದ್ದು, ಅಲ್ಲಿ ಐಸ್‌ಕ್ರೀಮ್‌ ಉತ್ಪಾದನಾ ಫ್ಯಾಕ್ಟರಿ ನಡೆಸುತ್ತಿದೆ. 1989ರಲ್ಲಿ ಇದನ್ನು ಕೆಐಎಡಿಬಿಯು ಕೈಗಾರಿಕಾ ಪ್ರದೇಶ ಎಂದು ಘೋಷಿಸಿತ್ತು.

ಆಕ್ಷೇಪಾರ್ಹವಾದ ಭೂಮಿಯನ್ನು 1989ರಲ್ಲಿ ಜಾಯ್‌ ಐಸ್‌ಕ್ರೀಮ್ಸ್‌ಗೆ ಭೋಗ್ಯಕ್ಕೆ ಕೆಐಎಡಿಬಿ ನೀಡಿತ್ತು. 2006ರ ಮಾರ್ಚ್‌ 31ರಂದು ವಿಶೇಷ ಜಿಲ್ಲಾಧಿಕಾರಿಯು ಲಿಖಿತ ದಾಖಲೆಯ ಮೂಲಕ ಪರಭಾರೆ ಷರತ್ತು ವಿಧಿಸಿ ಭೂಮಿಯನ್ನು ಕೆಐಎಡಿಬಿಗೆ ವರ್ಗಾಯಿಸಿದ್ದರು.

ಜಾಯ್‌ ಐಸ್‌ಕ್ರೀಮ್ಸ್‌ ಕೋರಿಕೆಯ ಹಿನ್ನೆಲೆಯಲ್ಲಿ 2006ರ ಜುಲೈ 21ರಂದು ಕೆಐಎಡಿಬಿಯು ಜಾಯ್‌ ಐಸ್‌ಕ್ರೀಮ್ಸ್‌ಗೆ 5.30 ಕೋಟಿ ರೂಪಾಯಿಗೆ ಭೂಮಿ ಕ್ರಯ ಮಾಡಿಕೊಟ್ಟಿತ್ತು. 2006ರ ಆಗಸ್ಟ್‌ 30ರಂದು ಜಾಯ್‌ ಐಸ್‌ಕ್ರೀಮ್ಸ್‌ ಈ ಭೂಮಿಯನ್ನು ಪ್ರೆಸ್ಟೀಜ್‌ ಎಸ್ಟೇಟ್ಸ್‌ ಪ್ರಾಜೆಕ್ಟ್ಸ್‌ಗೆ ಮಾರಾಟ ಮಾಡಿತ್ತು.

ಆನಂತರ, ಭೂಮಿ ಮಂಜೂರು ನಿಯಮಗಳನ್ನು ಜಾಯ್‌ ಐಸ್‌ಕ್ರೀಮ್ಸ್‌ ಉಲ್ಲಂಘಿಸಿದೆ ಎಂದು 2015ರ ಮೇ 23ರಂದು ಮಂಜೂರಾತಿ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿತ್ತು. ಕ್ರಯ ಪತ್ರ ಸೇರಿದಂತೆ ಎಲ್ಲಾ ವರ್ಗಾವಣೆಗಳನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಸಮರ್ಥನೀಯವಲ್ಲ ಎಂದು ಏಕಸದಸ್ಯ ಪೀಠ ಹೇಳಿತ್ತು. ಈಗ ಇದನ್ನು ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ.

andolana

Recent Posts

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

5 mins ago

ಮೈಸೂರು | ಮನುಸ್ಮೃತಿ ಸುಟ್ಟು ಸಮಾನತೆ ಜ್ಯೋತಿ ಬೆಳಗಿಸಿದ ದಸಂಸ

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ…

12 mins ago

ಮರ್ಯಾದೆ ಹತ್ಯೆಗೆ ಮನುಸ್ಮೃತಿ ನಿಯಮಗಳೇ ಕಾರಣ : ಚಿಂತಕ ಶಿವಸುಂದರ್‌ ಪ್ರತಿಪಾದನೆ

ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ…

31 mins ago

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…

41 mins ago

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

2 hours ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

2 hours ago