ದೇಶ- ವಿದೇಶ

ಜಾಯ್‌ ಐಸ್‌ಕ್ರೀಮ್ ಭೂ ವಿವಾದ: 3.23 ಎಕರೆ ಭೂಮಿ ಪ್ರೆಸ್ಟೀಜ್‌ ಎಸ್ಟೇಟ್‌ಗೆ ಸೇರಿದೆ: ವಿಭಾಗೀಯ ಪೀಠದ ಸ್ಪಷ್ಟೋಕ್ತಿ

ಬೆಂಗಳೂರು: ಕೃಷ್ಣರಾಜಪುರ ಹೋಬಳಿಯ ಪಟ್ಟಂದೂರ ಅಗ್ರಹಾರದಲ್ಲಿನ 3.23 ಎಕರೆ ಭೂಮಿಯು ಪ್ರತಿಷ್ಠಿತ ಪ್ರೆಸ್ಟೀಜ್‌ ಎಸ್ಟೇಟ್‌ ಪ್ರಾಜೆಕ್ಟ್‌ ಲಿಮಿಟೆಡ್‌ಗೆ ಸೇರಿದೆ ಎಂದು ಆದೇಶ ಮಾಡಿದ್ದ‌ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠವು ಎತ್ತಿ ಹಿಡಿದಿದೆ.

ರಾಜ್ಯ ಸರ್ಕಾರ ಮತ್ತು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ಮಾಡಿದೆ.

“ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಐಎಡಿಬಿ) ಒಂದೊಮ್ಮೆ ಭೂಮಿ ಹಂಚಿಕೆ ಮಾಡಿದ್ದರೆ ಕರ್ನಾಟಕ ಭೂಮಿ ಮಂಜೂರು ನಿಯಮಗಳ ಅಡಿ ಭೂಮಿ ಪರಭಾರೆ (ನಾನ್‌ ಏಲಿಯನೇಷನ್) ಮಾಡದಿರುವ ಷರತ್ತು ಅನ್ವಯಿಸುವುದಿಲ್ಲ” ಎಂದು ಪೀಠ ಹೇಳಿದೆ.

“ರಾಜ್ಯ ಸರ್ಕಾರದ ಅನುಮತಿ ಪಡೆದು ಕೆಐಎಡಿಬಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಹೀಗಾಗಿ, ಕೆಐಎಡಿಬಿ ನಿಯಮ 20(1)(ಸಿ)ಗೆ ವಿರುದ್ಧವಾಗಿ ಭೂಮಿ ಹಂಚಿಕೆ ಮಾಡಲಾಗಿದೆ ಎಂಬ ವಾದವನ್ನು ಒಪ್ಪಲಾಗದು” ಎಂದು ನ್ಯಾಯಾಲಯ ಹೇಳಿದೆ ಹೇಳಿದೆ.

“ಕೆಐಎಡಿಬಿಗೆ ಭೂಮಿ ಹಂಚಿಕೆ ಮಾಡಿರುವುದಕ್ಕೆ ಭೂಮಿ ಪರಭಾರೆ ಷರತ್ತು ಅನ್ವಯಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಲಿ ಪ್ರಕರಣದಲ್ಲಿ ಕರ್ನಾಟಕ ಸರ್ಕಾರವು ಕೆಐಎಡಿಬಿಗೆ ಭೂಮಿ ಹಂಚಿಕೆ ಮಾಡಿದೆ. ನಿಯಮದ 28(2) ಉಪಬಂಧದ ಅಡಿ ಭೂಮಿ ಪರಭಾರೆ ಷರತ್ತನ್ನು ಕರ್ನಾಟಕ ಸರ್ಕಾರವು ಸರಿಯಾಗಿ ಅನ್ವಯಿಸಿಲ್ಲ. ಹೀಗಾಗಿ, 2006 ಮಾರ್ಚ್‌ 31ರ ಮೆಮೊ ಮೂಲಕ ಜಿಲ್ಲಾಧಿಕಾರಿಯು ನಿಯಮ ಅನ್ವಯಿಸಬಾರದಿತ್ತು” ಎಂದು ಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಜಾಯ್‌ ಐಸ್‌ಕ್ರೀಮ್ಸ್‌ ಪ್ರೈವೇಟ್‌ ಲಿಮಿಟೆಡ್‌ ಭೂಮಿಯ ಮಾಲೀಕತ್ವ ಹೊಂದಿದ್ದು, ಅಲ್ಲಿ ಐಸ್‌ಕ್ರೀಮ್‌ ಉತ್ಪಾದನಾ ಫ್ಯಾಕ್ಟರಿ ನಡೆಸುತ್ತಿದೆ. 1989ರಲ್ಲಿ ಇದನ್ನು ಕೆಐಎಡಿಬಿಯು ಕೈಗಾರಿಕಾ ಪ್ರದೇಶ ಎಂದು ಘೋಷಿಸಿತ್ತು.

ಆಕ್ಷೇಪಾರ್ಹವಾದ ಭೂಮಿಯನ್ನು 1989ರಲ್ಲಿ ಜಾಯ್‌ ಐಸ್‌ಕ್ರೀಮ್ಸ್‌ಗೆ ಭೋಗ್ಯಕ್ಕೆ ಕೆಐಎಡಿಬಿ ನೀಡಿತ್ತು. 2006ರ ಮಾರ್ಚ್‌ 31ರಂದು ವಿಶೇಷ ಜಿಲ್ಲಾಧಿಕಾರಿಯು ಲಿಖಿತ ದಾಖಲೆಯ ಮೂಲಕ ಪರಭಾರೆ ಷರತ್ತು ವಿಧಿಸಿ ಭೂಮಿಯನ್ನು ಕೆಐಎಡಿಬಿಗೆ ವರ್ಗಾಯಿಸಿದ್ದರು.

ಜಾಯ್‌ ಐಸ್‌ಕ್ರೀಮ್ಸ್‌ ಕೋರಿಕೆಯ ಹಿನ್ನೆಲೆಯಲ್ಲಿ 2006ರ ಜುಲೈ 21ರಂದು ಕೆಐಎಡಿಬಿಯು ಜಾಯ್‌ ಐಸ್‌ಕ್ರೀಮ್ಸ್‌ಗೆ 5.30 ಕೋಟಿ ರೂಪಾಯಿಗೆ ಭೂಮಿ ಕ್ರಯ ಮಾಡಿಕೊಟ್ಟಿತ್ತು. 2006ರ ಆಗಸ್ಟ್‌ 30ರಂದು ಜಾಯ್‌ ಐಸ್‌ಕ್ರೀಮ್ಸ್‌ ಈ ಭೂಮಿಯನ್ನು ಪ್ರೆಸ್ಟೀಜ್‌ ಎಸ್ಟೇಟ್ಸ್‌ ಪ್ರಾಜೆಕ್ಟ್ಸ್‌ಗೆ ಮಾರಾಟ ಮಾಡಿತ್ತು.

ಆನಂತರ, ಭೂಮಿ ಮಂಜೂರು ನಿಯಮಗಳನ್ನು ಜಾಯ್‌ ಐಸ್‌ಕ್ರೀಮ್ಸ್‌ ಉಲ್ಲಂಘಿಸಿದೆ ಎಂದು 2015ರ ಮೇ 23ರಂದು ಮಂಜೂರಾತಿ ಆದೇಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿತ್ತು. ಕ್ರಯ ಪತ್ರ ಸೇರಿದಂತೆ ಎಲ್ಲಾ ವರ್ಗಾವಣೆಗಳನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಸಮರ್ಥನೀಯವಲ್ಲ ಎಂದು ಏಕಸದಸ್ಯ ಪೀಠ ಹೇಳಿತ್ತು. ಈಗ ಇದನ್ನು ವಿಭಾಗೀಯ ಪೀಠವು ಏಕಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ.

andolana

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

7 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

8 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

8 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

9 hours ago