ದೇಶ- ವಿದೇಶ

ಜುಲೈ.24ರಂದು ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ

ನವದೆಹಲಿ: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಬಗ್ಗೆ ಭಾರೀ ನಿರೀಕ್ಷೆಗಳಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಈಗಾಗಲೇ ಬಜೆಟ್‌ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಬಜೆಟ್‌ ಮಂಡನೆ ಆಗಬಹುದು ಎಂದು ಹೇಳಲಾಗುತ್ತಿದೆ.

ಜುಲೈ.22ಕ್ಕೆ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಜುಲೈ.23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ಆಗಬಹುದು. ಜುಲೈ.24ಕ್ಕೆ ಯೂನಿಯನ್‌ ಬಜೆಟ್‌ನ್ನು ಪ್ರಸ್ತುಪಡಿಸಬಹುದು ಎನ್ನಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸುವ ನಿರೀಕ್ಷೆಯಿದೆ.

18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ನಿನ್ನೆ ಮುಕ್ತಾಯಗೊಂಡಿದೆ. ವಾಡಿಕೆ ಪ್ರಕಾರ ಎರಡನೇ ಅಧಿವೇಶನವನ್ನು 15 ದಿನಗಳ ಅಂತರದಲ್ಲಿ ಮಾಡಲಾಗುತ್ತದೆ. ಅದರಂತೆ ಜುಲೈ.18ಕ್ಕೆ ಮುಂಗಾರು ಅಧಿವೇಶನ ಶುರುವಾಗಲಿದೆ. ಅದೇ ರೀತಿ ಜುಲೈ.20ರಂದು ಬಜೆಟ್‌ ಮಂಡನೆ ಮಾಡಬೇಕಾಗುತ್ತದೆ. ಆದರೆ ಈ ಬಾರಿ ಅಧಿವೇಶನ ತುಸು ವಿಳಂಬವಾಗಿ ಶುರುವಾಗಬಹುದು. ಆದ್ದರಿಂದ ಜುಲೈ.22ಕ್ಕೆ ಅಧಿವೇಶನ ಆರಂಭವಾಗಿ ಜುಲೈ.24ಕ್ಕೆ ಬಜೆಟ್‌ ಮಂಡನೆ ಆಗಬಹುದು ಎನ್ನಲಾಗುತ್ತಿದೆ.

ಇನ್ನೂ ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಬಾರಿಯ ಬಜೆಟ್‌ನಲ್ಲಿ ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ ಸಿಗಲಿದೆ. ದೂರಗಾಮಿ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಳು ಅನಾವರಣಗೊಳ್ಳಲಿವೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಈ ಬಾರಿಯ ಕೇಂದ್ರ ಬಜೆಟ್‌ ಜನಸಾಮಾನ್ಯರಿಗೆ ಬಂಪರ್‌ ಆಫರ್‌ ನೀಡಲಿದೆ ಎನ್ನಲಾಗಿದ್ದು, ಎಲ್ಲರ ಚಿತ್ತ ಈಗ ಕೇಂದ್ರ ಸರ್ಕಾರದ ಬಜೆಟ್‌ನತ್ತ ನೆಟ್ಟಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

6 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

6 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

7 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

7 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

7 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

7 hours ago