ದೇಶ- ವಿದೇಶ

ಜುಲೈ.24ರಂದು ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ

ನವದೆಹಲಿ: ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲಾ ಹೊಸ ಮಟ್ಟದ ನಿರೀಕ್ಷೆಗಳು ಹುಟ್ಟುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಬಗ್ಗೆ ಭಾರೀ ನಿರೀಕ್ಷೆಗಳಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಈಗಾಗಲೇ ಬಜೆಟ್‌ ತಯಾರಿಯಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಜುಲೈ ಕೊನೆಯ ವಾರದಲ್ಲಿ ಬಜೆಟ್‌ ಮಂಡನೆ ಆಗಬಹುದು ಎಂದು ಹೇಳಲಾಗುತ್ತಿದೆ.

ಜುಲೈ.22ಕ್ಕೆ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಜುಲೈ.23ಕ್ಕೆ ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ಆಗಬಹುದು. ಜುಲೈ.24ಕ್ಕೆ ಯೂನಿಯನ್‌ ಬಜೆಟ್‌ನ್ನು ಪ್ರಸ್ತುಪಡಿಸಬಹುದು ಎನ್ನಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ಪ್ರಕಟಿಸುವ ನಿರೀಕ್ಷೆಯಿದೆ.

18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ನಿನ್ನೆ ಮುಕ್ತಾಯಗೊಂಡಿದೆ. ವಾಡಿಕೆ ಪ್ರಕಾರ ಎರಡನೇ ಅಧಿವೇಶನವನ್ನು 15 ದಿನಗಳ ಅಂತರದಲ್ಲಿ ಮಾಡಲಾಗುತ್ತದೆ. ಅದರಂತೆ ಜುಲೈ.18ಕ್ಕೆ ಮುಂಗಾರು ಅಧಿವೇಶನ ಶುರುವಾಗಲಿದೆ. ಅದೇ ರೀತಿ ಜುಲೈ.20ರಂದು ಬಜೆಟ್‌ ಮಂಡನೆ ಮಾಡಬೇಕಾಗುತ್ತದೆ. ಆದರೆ ಈ ಬಾರಿ ಅಧಿವೇಶನ ತುಸು ವಿಳಂಬವಾಗಿ ಶುರುವಾಗಬಹುದು. ಆದ್ದರಿಂದ ಜುಲೈ.22ಕ್ಕೆ ಅಧಿವೇಶನ ಆರಂಭವಾಗಿ ಜುಲೈ.24ಕ್ಕೆ ಬಜೆಟ್‌ ಮಂಡನೆ ಆಗಬಹುದು ಎನ್ನಲಾಗುತ್ತಿದೆ.

ಇನ್ನೂ ಸಂಸತ್ತಿನಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಬಾರಿಯ ಬಜೆಟ್‌ನಲ್ಲಿ ಬಡವರು, ಯುವಜನರು, ಮಹಿಳೆಯರು, ರೈತರಿಗೆ ಆದ್ಯತೆ ಸಿಗಲಿದೆ. ದೂರಗಾಮಿ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಗಳು ಅನಾವರಣಗೊಳ್ಳಲಿವೆ ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಈ ಬಾರಿಯ ಕೇಂದ್ರ ಬಜೆಟ್‌ ಜನಸಾಮಾನ್ಯರಿಗೆ ಬಂಪರ್‌ ಆಫರ್‌ ನೀಡಲಿದೆ ಎನ್ನಲಾಗಿದ್ದು, ಎಲ್ಲರ ಚಿತ್ತ ಈಗ ಕೇಂದ್ರ ಸರ್ಕಾರದ ಬಜೆಟ್‌ನತ್ತ ನೆಟ್ಟಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

23 mins ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

28 mins ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

32 mins ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

36 mins ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

40 mins ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

45 mins ago