ದೇಶ- ವಿದೇಶ

ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಆಚರಿಸಲು ಕೇಂದ್ರ ನಿರ್ಧಾರ: ಜೂನ್.‌4ರಂದು ಮೋದಿ ಮುಕ್ತ ದಿವಸ್‌ ಎಂದ ಕಾಂಗ್ರೆಸ್‌

ನವದೆಹಲಿ: ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಜೂನ್.‌4ನ್ನು ಮೋದಿ ಮುಕ್ತಿ ದಿವಸ್‌ ಎಂದು ಆಚರಿಸಲು ಹೇಳಿದೆ.

ಜೂನ್‌.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಿದರು. ಈ ರೀತಿ ಸೀಟುಗಳನ್ನು ಕಳೆದುಕೊಂಡಿರುವುದು ಪ್ರಧಾನಿ ಮೋದಿಯವರ ನೈತಿಕ ಸೋಲು ಎಂದು ವಿರೋಧ ಪಕ್ಷಗಳ ಇಂಡಿಯಾ ಬಣ ಹೇಳಿದೆ.

ಸಂವಿಧಾನ್‌ ಹತ್ಯಾ ದಿವಸ್‌ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಕೇಂದ್ರದ ಈ ನಡೆ ಹೆಡ್ ಲೈನ್‌ ಹಪಾಹಪಿಯ ಕಸರತ್ತು ಎಂದು ಹೇಳಿದ್ದಾರೆ.

ಜೈವಿಕ ಅಲ್ಲದ ಪ್ರಧಾನಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್‌ ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್‌ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್‌ ಎಂದು ನೆನಪಿಸಲಾಗುವುದು ಎಂದು ಹೇಳಿದ್ದಾರೆ.

ಇವರು ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಪೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಇವರು ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು | ಟ್ರೆಕ್ಕಿಂಗ್ ಹೊರಟಿದ್ದ 36 ವರ್ಷದ ಮಹಿಳೆ ನಾಪತ್ತೆ

ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…

3 mins ago

ಮಹದೇಶ್ವರ ಬೆಟ್ಟ | ರಸ್ತೆಬದಿಯಲ್ಲೇ ಮತ್ತೆ ಚಿರತೆ ಪ್ರತ್ಯಕ್ಷ ; ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…

26 mins ago

ಮಾಲ್ದಾರೆ : ರಸ್ತೆ ಕಾಮಗಾರಿ ಬಳಿಕ ಸಿಮೆಂಟ್ ಚೀಲಗಳ ತ್ಯಾಜ್ಯ ; ಪಂಚಾಯಿತಿ ವಾಹನ ದುರುಪಯೋಗ ಆರೋಪ

ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…

1 hour ago

ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ

ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…

2 hours ago

ಇಂದಿನಿಂದ ಕೊಡವ ಕೌಟುಂಬಿಕ ಕ್ರಿಕೆಟ್‌ ಉತ್ಸವ

24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…

4 hours ago

ಓದುಗರ ಪತ್ರ | ಕಠಿಣ ಕ್ರಮ ಕೈಗೊಳ್ಳಿ

ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…

4 hours ago