ದೇಶ- ವಿದೇಶ

ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಆಚರಿಸಲು ಕೇಂದ್ರ ನಿರ್ಧಾರ: ಜೂನ್.‌4ರಂದು ಮೋದಿ ಮುಕ್ತ ದಿವಸ್‌ ಎಂದ ಕಾಂಗ್ರೆಸ್‌

ನವದೆಹಲಿ: ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಜೂನ್.‌4ನ್ನು ಮೋದಿ ಮುಕ್ತಿ ದಿವಸ್‌ ಎಂದು ಆಚರಿಸಲು ಹೇಳಿದೆ.

ಜೂನ್‌.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಿದರು. ಈ ರೀತಿ ಸೀಟುಗಳನ್ನು ಕಳೆದುಕೊಂಡಿರುವುದು ಪ್ರಧಾನಿ ಮೋದಿಯವರ ನೈತಿಕ ಸೋಲು ಎಂದು ವಿರೋಧ ಪಕ್ಷಗಳ ಇಂಡಿಯಾ ಬಣ ಹೇಳಿದೆ.

ಸಂವಿಧಾನ್‌ ಹತ್ಯಾ ದಿವಸ್‌ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಕೇಂದ್ರದ ಈ ನಡೆ ಹೆಡ್ ಲೈನ್‌ ಹಪಾಹಪಿಯ ಕಸರತ್ತು ಎಂದು ಹೇಳಿದ್ದಾರೆ.

ಜೈವಿಕ ಅಲ್ಲದ ಪ್ರಧಾನಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್‌ ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್‌ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್‌ ಎಂದು ನೆನಪಿಸಲಾಗುವುದು ಎಂದು ಹೇಳಿದ್ದಾರೆ.

ಇವರು ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಪೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಇವರು ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

11 mins ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

57 mins ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

2 hours ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago