ದೇಶ- ವಿದೇಶ

ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಆಚರಿಸಲು ಕೇಂದ್ರ ನಿರ್ಧಾರ: ಜೂನ್.‌4ರಂದು ಮೋದಿ ಮುಕ್ತ ದಿವಸ್‌ ಎಂದ ಕಾಂಗ್ರೆಸ್‌

ನವದೆಹಲಿ: ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಜೂನ್.‌4ನ್ನು ಮೋದಿ ಮುಕ್ತಿ ದಿವಸ್‌ ಎಂದು ಆಚರಿಸಲು ಹೇಳಿದೆ.

ಜೂನ್‌.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಿದರು. ಈ ರೀತಿ ಸೀಟುಗಳನ್ನು ಕಳೆದುಕೊಂಡಿರುವುದು ಪ್ರಧಾನಿ ಮೋದಿಯವರ ನೈತಿಕ ಸೋಲು ಎಂದು ವಿರೋಧ ಪಕ್ಷಗಳ ಇಂಡಿಯಾ ಬಣ ಹೇಳಿದೆ.

ಸಂವಿಧಾನ್‌ ಹತ್ಯಾ ದಿವಸ್‌ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಕೇಂದ್ರದ ಈ ನಡೆ ಹೆಡ್ ಲೈನ್‌ ಹಪಾಹಪಿಯ ಕಸರತ್ತು ಎಂದು ಹೇಳಿದ್ದಾರೆ.

ಜೈವಿಕ ಅಲ್ಲದ ಪ್ರಧಾನಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್‌ ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್‌ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್‌ ಎಂದು ನೆನಪಿಸಲಾಗುವುದು ಎಂದು ಹೇಳಿದ್ದಾರೆ.

ಇವರು ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಪೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಇವರು ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

8 hours ago