ದೇಶ- ವಿದೇಶ

ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಆಚರಿಸಲು ಕೇಂದ್ರ ನಿರ್ಧಾರ: ಜೂನ್.‌4ರಂದು ಮೋದಿ ಮುಕ್ತ ದಿವಸ್‌ ಎಂದ ಕಾಂಗ್ರೆಸ್‌

ನವದೆಹಲಿ: ಜೂನ್.‌25ರಂದು ಸಂವಿಧಾನ್‌ ಹತ್ಯಾ ದಿವಸ್‌ ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಜೂನ್.‌4ನ್ನು ಮೋದಿ ಮುಕ್ತಿ ದಿವಸ್‌ ಎಂದು ಆಚರಿಸಲು ಹೇಳಿದೆ.

ಜೂನ್‌.4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಿದರು. ಈ ರೀತಿ ಸೀಟುಗಳನ್ನು ಕಳೆದುಕೊಂಡಿರುವುದು ಪ್ರಧಾನಿ ಮೋದಿಯವರ ನೈತಿಕ ಸೋಲು ಎಂದು ವಿರೋಧ ಪಕ್ಷಗಳ ಇಂಡಿಯಾ ಬಣ ಹೇಳಿದೆ.

ಸಂವಿಧಾನ್‌ ಹತ್ಯಾ ದಿವಸ್‌ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಕೇಂದ್ರದ ಈ ನಡೆ ಹೆಡ್ ಲೈನ್‌ ಹಪಾಹಪಿಯ ಕಸರತ್ತು ಎಂದು ಹೇಳಿದ್ದಾರೆ.

ಜೈವಿಕ ಅಲ್ಲದ ಪ್ರಧಾನಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್‌ ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್‌ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್‌ ಎಂದು ನೆನಪಿಸಲಾಗುವುದು ಎಂದು ಹೇಳಿದ್ದಾರೆ.

ಇವರು ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಪೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಇವರು ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

11 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

13 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

16 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

20 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

24 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

24 hours ago