ಹೊಸದಿಲ್ಲಿ : ಸುಪ್ರೀಂ ಕೋರ್ಟ್ನ ಮುಂದಿನ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ.ಭೂಷಣ್ ರಾಮಕೃಷ್ಣ ಗವಾಯಿ(ಬಿ.ಆರ್ ಗವಾಯಿ) ಹೆಸರನ್ನು ನ್ಯಾ.ಸಂಜಿವ್ ಖನ್ನಾ ಅವರು ಶಿಫಾರಸು ಮಾಡಿದ್ದಾರೆ.
ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ.ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ಗವಾಯಿ ಅವರು ಮೇ.14 ರಂದು ಸುಪ್ರೀಂ ಕೋರ್ಟ್ನ 52ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಮೇ.13 ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ನವೆಂಬರ್ 2024 ರಲ್ಲಿ ಸಿಜೆಐ ಆಗಿ ಅಧಿಕಾರ ವಹಿಸಿಕೊಂಡರು.
ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್ 24, 1960 ರಂದು ಅಮರಾವತಿಯಲ್ಲಿ ಜನಿಸಿದರು. ಅವರು ಮಾರ್ಚ್ 16, 1985 ರಂದು ಬಾರ್ ಕೌನ್ಸಿಲ್ ಸೇರಿದರು. 2019 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ಕ್ಯಾರಕಾಸ್ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…
ಪ್ರೊ.ಬಿ.ಜಯಪ್ರಕಾಶ್ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…