ದೇಶ- ವಿದೇಶ

ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯಕಾಂತ್‌ : ನ.24ರಂದು CJI ಆಗಿ ಪ್ರಮಾಣ ವಚನ

ಹೊಸದಿಲ್ಲಿ : ಭಾರತದ 53 ನೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ನ್ಯಾ.ಸೂರ್ಯಕಾಂತ್ ಅವರು ನ.24ರಂದು ಪ್ರಮಾಣವಚನ
ಸ್ವೀಕರಿಸಲಿದ್ದಾರೆ. 2027 ಫೆಬ್ರವರಿ 9, ರವರೆಗೆ ಅಧಿಕಾರದಲ್ಲಿ ಚಲಾಯಿಸಲಿದ್ದಾರೆ.

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. ನ್ಯಾ. ಸೂರ್ಯಕಾಂತ್ ಅವರು ಪ್ರಸ್ತುತ ಸುಪ್ರೀಂಕೋರ್ಟ್‍ನ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಭೂತಾನ್, ಕೀನ್ಯಾ, ಮಾರಿಷಿಯಸ್, ನೇಪಾಳ, ಶ್ರೀಲಂಕಾ, ಬ್ರೆಜಿಲ್ ಸೇರಿದಂತೆ 7 ದೇಶಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಸುಪ್ರೀಂಕೋರ್ಟ್‍ನ ನ್ಯಾಯಾಧೀಶರು ಭಾಗವಹಿಸಲಿದ್ದಾರೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಜೆಐ ಪ್ರಮಾಣವಚನ ಸಮಾರಂಭಕ್ಕೆ ಬೇರೆ ದೇಶದ ನ್ಯಾಯಮೂರ್ತಿಗಳು ಭಾಗವಹಿಸುತ್ತಿದ್ದಾರೆ. ಜೊತೆಗೆ ಅವರ ಕುಟುಂಬಸ್ಥರು ಭಾಗಿಯಾಗುವ ನಿರೀಕ್ಷೆಯಿದೆ.

ಪ್ರಸ್ತುತ ಸಿಜೆಐಯಾಗಿರುವ ಗವಾಯಿ ಅವರ ಅಧಿಕಾರಾವಧಿಯು ಇದೇ ನವೆಂಬರ್ 23ರಂದು ಕೊನೆಗೊಳ್ಳಲಿದೆ. ಬಳಿಕ ನ್ಯಾ.ಸೂರ್ಯಕಾಂತ್ ಅವರು 2027ರ ಫೆ.9ರವರೆಗೆ ಸೇವೆ ಸಲ್ಲಿಸಲಿದ್ದು, 14 ತಿಂಗಳು ಅಧಿಕಾರದಲ್ಲಿರಲಿದ್ದಾರೆ. ಇನ್ನೂ ನ್ಯಾ. ಸೂರ್ಯಕಾಂತ್ ಅವರ ಕುಟುಂಬಸ್ಥರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಅವರ ಸಹೋದರರಾದ ರಿಷಿಕಾಂತ್, ಶಿವಕಾಂತ್ ಮತ್ತು ದೇವಕಾಂತ್ ಅವರು ತಮ್ಮ ಕುಟುಂಬಗಳೊಂದಿಗೆ ಭಾಗಿಯಾಗಲಿದ್ದು, ಪ್ರಮಾಣವಚನಕ್ಕೂ ಒಂದು ದಿನ ಮೊದಲು ದೆಹಲಿಗೆ ತೆರಳಿ, ಬಳಿಕ ಹರಿಯಾಣ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: ಮುಂದಿನ CJI ಆಗಿ ನ್ಯಾ.ಸೂರ್ಯಕಾಂತ್‌ ನೇಮಕಕ್ಕೆ ಶಿಫಾರಸು ಮಾಡಿದ ಗವಾಯಿ

ಜಸ್ಟೀಸ್ ಸೂರ್ಯಕಾಂತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದತಿ ವಿಚಾರಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೇ ನ್ಯಾ.ಸೂರ್ಯಕಾಂತ್ ಅವರು ಚುನಾವಣಾ ಬಾಂಡ್‍ಗಳು ಅಕ್ರಮ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್ ಪೀಠದ ಸದಸ್ಯರಾಗಿದ್ದರು.

ನ್ಯಾ.ಸೂರ್ಯಕಾಂತ್ ಅವರು ಪೆಗಾಸಸ್ ಫೋನ್ ಕದ್ದಾಲಿಕೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರೋಹ್ಟಕ್‍ನ ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದಿಂದ 1984ರಲ್ಲಿ ಕಾನೂನು ಪದವಿ ಪಡೆದ ನ್ಯಾ. ಸೂರ್ಯಕಾಂತ್, 1985ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನಲ್ಲಿ ಕಾನೂನು ಅಭ್ಯಾಸವನ್ನು ಆರಂಭಿಸಿದರು.

2000ರಲ್ಲಿ ಹರಿಯಾಣದ ಅತ್ಯಂತ ಯುವ ವಕೀಲರಾಗಿ ನೇಮಕೊಂಡಿದ್ದ ನ್ಯಾ.ಸೂರ್ಯಕಾಂತ್, 2001ರಲ್ಲಿ ಸಿನಿಯರ್ ಅಡ್ವೋಕೇಟ್ ಆಗಿ ನೇಮಕೊಂಡಿದ್ದರು. ಮುಂದೆ 2004ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ಜಡ್ಜ್ ಆಗಿ ನ್ಯಾ.ಸೂರ್ಯಕಾಂತ್ ನೇಮಕಗೊಂಡರು. ಅದೇ ರೀತಿ 2018ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್‍ನ ಮುಖ್ಯ ನ್ಯಾಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಸೇವೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

6 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

7 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

8 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

9 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

13 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

13 hours ago