ದೇಶ- ವಿದೇಶ

ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯಕಾಂತ್‌ : ನ.24ರಂದು CJI ಆಗಿ ಪ್ರಮಾಣ ವಚನ

ಹೊಸದಿಲ್ಲಿ : ಭಾರತದ 53 ನೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ನ್ಯಾ.ಸೂರ್ಯಕಾಂತ್ ಅವರು ನ.24ರಂದು ಪ್ರಮಾಣವಚನ
ಸ್ವೀಕರಿಸಲಿದ್ದಾರೆ. 2027 ಫೆಬ್ರವರಿ 9, ರವರೆಗೆ ಅಧಿಕಾರದಲ್ಲಿ ಚಲಾಯಿಸಲಿದ್ದಾರೆ.

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. ನ್ಯಾ. ಸೂರ್ಯಕಾಂತ್ ಅವರು ಪ್ರಸ್ತುತ ಸುಪ್ರೀಂಕೋರ್ಟ್‍ನ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಭೂತಾನ್, ಕೀನ್ಯಾ, ಮಾರಿಷಿಯಸ್, ನೇಪಾಳ, ಶ್ರೀಲಂಕಾ, ಬ್ರೆಜಿಲ್ ಸೇರಿದಂತೆ 7 ದೇಶಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಸುಪ್ರೀಂಕೋರ್ಟ್‍ನ ನ್ಯಾಯಾಧೀಶರು ಭಾಗವಹಿಸಲಿದ್ದಾರೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಜೆಐ ಪ್ರಮಾಣವಚನ ಸಮಾರಂಭಕ್ಕೆ ಬೇರೆ ದೇಶದ ನ್ಯಾಯಮೂರ್ತಿಗಳು ಭಾಗವಹಿಸುತ್ತಿದ್ದಾರೆ. ಜೊತೆಗೆ ಅವರ ಕುಟುಂಬಸ್ಥರು ಭಾಗಿಯಾಗುವ ನಿರೀಕ್ಷೆಯಿದೆ.

ಪ್ರಸ್ತುತ ಸಿಜೆಐಯಾಗಿರುವ ಗವಾಯಿ ಅವರ ಅಧಿಕಾರಾವಧಿಯು ಇದೇ ನವೆಂಬರ್ 23ರಂದು ಕೊನೆಗೊಳ್ಳಲಿದೆ. ಬಳಿಕ ನ್ಯಾ.ಸೂರ್ಯಕಾಂತ್ ಅವರು 2027ರ ಫೆ.9ರವರೆಗೆ ಸೇವೆ ಸಲ್ಲಿಸಲಿದ್ದು, 14 ತಿಂಗಳು ಅಧಿಕಾರದಲ್ಲಿರಲಿದ್ದಾರೆ. ಇನ್ನೂ ನ್ಯಾ. ಸೂರ್ಯಕಾಂತ್ ಅವರ ಕುಟುಂಬಸ್ಥರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಅವರ ಸಹೋದರರಾದ ರಿಷಿಕಾಂತ್, ಶಿವಕಾಂತ್ ಮತ್ತು ದೇವಕಾಂತ್ ಅವರು ತಮ್ಮ ಕುಟುಂಬಗಳೊಂದಿಗೆ ಭಾಗಿಯಾಗಲಿದ್ದು, ಪ್ರಮಾಣವಚನಕ್ಕೂ ಒಂದು ದಿನ ಮೊದಲು ದೆಹಲಿಗೆ ತೆರಳಿ, ಬಳಿಕ ಹರಿಯಾಣ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: ಮುಂದಿನ CJI ಆಗಿ ನ್ಯಾ.ಸೂರ್ಯಕಾಂತ್‌ ನೇಮಕಕ್ಕೆ ಶಿಫಾರಸು ಮಾಡಿದ ಗವಾಯಿ

ಜಸ್ಟೀಸ್ ಸೂರ್ಯಕಾಂತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದತಿ ವಿಚಾರಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೇ ನ್ಯಾ.ಸೂರ್ಯಕಾಂತ್ ಅವರು ಚುನಾವಣಾ ಬಾಂಡ್‍ಗಳು ಅಕ್ರಮ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್ ಪೀಠದ ಸದಸ್ಯರಾಗಿದ್ದರು.

ನ್ಯಾ.ಸೂರ್ಯಕಾಂತ್ ಅವರು ಪೆಗಾಸಸ್ ಫೋನ್ ಕದ್ದಾಲಿಕೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರೋಹ್ಟಕ್‍ನ ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದಿಂದ 1984ರಲ್ಲಿ ಕಾನೂನು ಪದವಿ ಪಡೆದ ನ್ಯಾ. ಸೂರ್ಯಕಾಂತ್, 1985ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನಲ್ಲಿ ಕಾನೂನು ಅಭ್ಯಾಸವನ್ನು ಆರಂಭಿಸಿದರು.

2000ರಲ್ಲಿ ಹರಿಯಾಣದ ಅತ್ಯಂತ ಯುವ ವಕೀಲರಾಗಿ ನೇಮಕೊಂಡಿದ್ದ ನ್ಯಾ.ಸೂರ್ಯಕಾಂತ್, 2001ರಲ್ಲಿ ಸಿನಿಯರ್ ಅಡ್ವೋಕೇಟ್ ಆಗಿ ನೇಮಕೊಂಡಿದ್ದರು. ಮುಂದೆ 2004ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ಜಡ್ಜ್ ಆಗಿ ನ್ಯಾ.ಸೂರ್ಯಕಾಂತ್ ನೇಮಕಗೊಂಡರು. ಅದೇ ರೀತಿ 2018ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್‍ನ ಮುಖ್ಯ ನ್ಯಾಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಸೇವೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

1 hour ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

1 hour ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

1 hour ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

2 hours ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

3 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

4 hours ago