ದೇಶ- ವಿದೇಶ

ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯಕಾಂತ್‌ : ನ.24ರಂದು CJI ಆಗಿ ಪ್ರಮಾಣ ವಚನ

ಹೊಸದಿಲ್ಲಿ : ಭಾರತದ 53 ನೇ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾಯಮೂರ್ತಿ ನ್ಯಾ.ಸೂರ್ಯಕಾಂತ್ ಅವರು ನ.24ರಂದು ಪ್ರಮಾಣವಚನ
ಸ್ವೀಕರಿಸಲಿದ್ದಾರೆ. 2027 ಫೆಬ್ರವರಿ 9, ರವರೆಗೆ ಅಧಿಕಾರದಲ್ಲಿ ಚಲಾಯಿಸಲಿದ್ದಾರೆ.

ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. ನ್ಯಾ. ಸೂರ್ಯಕಾಂತ್ ಅವರು ಪ್ರಸ್ತುತ ಸುಪ್ರೀಂಕೋರ್ಟ್‍ನ ಎರಡನೇ ಹಿರಿಯ ನ್ಯಾಯಾಧೀಶರಾಗಿದ್ದಾರೆ.

ಪ್ರಮಾಣವಚನ ಸಮಾರಂಭದಲ್ಲಿ ಭೂತಾನ್, ಕೀನ್ಯಾ, ಮಾರಿಷಿಯಸ್, ನೇಪಾಳ, ಶ್ರೀಲಂಕಾ, ಬ್ರೆಜಿಲ್ ಸೇರಿದಂತೆ 7 ದೇಶಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಸುಪ್ರೀಂಕೋರ್ಟ್‍ನ ನ್ಯಾಯಾಧೀಶರು ಭಾಗವಹಿಸಲಿದ್ದಾರೆ. ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಜೆಐ ಪ್ರಮಾಣವಚನ ಸಮಾರಂಭಕ್ಕೆ ಬೇರೆ ದೇಶದ ನ್ಯಾಯಮೂರ್ತಿಗಳು ಭಾಗವಹಿಸುತ್ತಿದ್ದಾರೆ. ಜೊತೆಗೆ ಅವರ ಕುಟುಂಬಸ್ಥರು ಭಾಗಿಯಾಗುವ ನಿರೀಕ್ಷೆಯಿದೆ.

ಪ್ರಸ್ತುತ ಸಿಜೆಐಯಾಗಿರುವ ಗವಾಯಿ ಅವರ ಅಧಿಕಾರಾವಧಿಯು ಇದೇ ನವೆಂಬರ್ 23ರಂದು ಕೊನೆಗೊಳ್ಳಲಿದೆ. ಬಳಿಕ ನ್ಯಾ.ಸೂರ್ಯಕಾಂತ್ ಅವರು 2027ರ ಫೆ.9ರವರೆಗೆ ಸೇವೆ ಸಲ್ಲಿಸಲಿದ್ದು, 14 ತಿಂಗಳು ಅಧಿಕಾರದಲ್ಲಿರಲಿದ್ದಾರೆ. ಇನ್ನೂ ನ್ಯಾ. ಸೂರ್ಯಕಾಂತ್ ಅವರ ಕುಟುಂಬಸ್ಥರನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಅವರ ಸಹೋದರರಾದ ರಿಷಿಕಾಂತ್, ಶಿವಕಾಂತ್ ಮತ್ತು ದೇವಕಾಂತ್ ಅವರು ತಮ್ಮ ಕುಟುಂಬಗಳೊಂದಿಗೆ ಭಾಗಿಯಾಗಲಿದ್ದು, ಪ್ರಮಾಣವಚನಕ್ಕೂ ಒಂದು ದಿನ ಮೊದಲು ದೆಹಲಿಗೆ ತೆರಳಿ, ಬಳಿಕ ಹರಿಯಾಣ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ: ಮುಂದಿನ CJI ಆಗಿ ನ್ಯಾ.ಸೂರ್ಯಕಾಂತ್‌ ನೇಮಕಕ್ಕೆ ಶಿಫಾರಸು ಮಾಡಿದ ಗವಾಯಿ

ಜಸ್ಟೀಸ್ ಸೂರ್ಯಕಾಂತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದತಿ ವಿಚಾರಣೆಯಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೇ ನ್ಯಾ.ಸೂರ್ಯಕಾಂತ್ ಅವರು ಚುನಾವಣಾ ಬಾಂಡ್‍ಗಳು ಅಕ್ರಮ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್ ಪೀಠದ ಸದಸ್ಯರಾಗಿದ್ದರು.

ನ್ಯಾ.ಸೂರ್ಯಕಾಂತ್ ಅವರು ಪೆಗಾಸಸ್ ಫೋನ್ ಕದ್ದಾಲಿಕೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠದ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ರೋಹ್ಟಕ್‍ನ ಮಹರ್ಷಿ ದಯಾನಂದ್ ಸರಸ್ವತಿ ವಿಶ್ವವಿದ್ಯಾಲಯದಿಂದ 1984ರಲ್ಲಿ ಕಾನೂನು ಪದವಿ ಪಡೆದ ನ್ಯಾ. ಸೂರ್ಯಕಾಂತ್, 1985ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನಲ್ಲಿ ಕಾನೂನು ಅಭ್ಯಾಸವನ್ನು ಆರಂಭಿಸಿದರು.

2000ರಲ್ಲಿ ಹರಿಯಾಣದ ಅತ್ಯಂತ ಯುವ ವಕೀಲರಾಗಿ ನೇಮಕೊಂಡಿದ್ದ ನ್ಯಾ.ಸೂರ್ಯಕಾಂತ್, 2001ರಲ್ಲಿ ಸಿನಿಯರ್ ಅಡ್ವೋಕೇಟ್ ಆಗಿ ನೇಮಕೊಂಡಿದ್ದರು. ಮುಂದೆ 2004ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ಜಡ್ಜ್ ಆಗಿ ನ್ಯಾ.ಸೂರ್ಯಕಾಂತ್ ನೇಮಕಗೊಂಡರು. ಅದೇ ರೀತಿ 2018ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್‍ನ ಮುಖ್ಯ ನ್ಯಾಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಸೇವೆ ಸಲ್ಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago