ದೇಶ- ವಿದೇಶ

ಶೀಘ್ರದಲ್ಲೇ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಕೇಂದ್ರ ಸ್ಥಾಪನೆ: ಜ್ಯೋತಿರಾದಿತ್ಯ ಸಿಂಧಿಯಾ

ನವದೆಹಲಿ/ಮಧ್ಯ ಪ್ರದೇಶ: ಶೀಘ್ರದಲ್ಲಿಯೇ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ನೂತನವಾಗಿ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಗುಣದಲ್ಲಿ ಇಂದು(ಜನವರಿ.12) ನೂತನ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ಈ ರಾಜ್ಯದಲ್ಲಿ ಹೊಸದಾಗಿ ಆರು ಪಾಸ್‌ಪೋರ್ಟ್‌ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಘೋಷಿಸಿದರು.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ್ಯಾಂತ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನೂತನ ಪಾಸ್‌ಪೋರ್ಟ್‌ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಿದ್ದಾರೆ. ಅಲ್ಲದೇ ಈ ಬಗ್ಗೆ ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಅಂಚೆ ಇಲಾಖೆಯೂ ಈ ನಿರ್ಣಯವನ್ನು ನನಸಾಗಿಸಲು ಬದ್ಧವಾಗಿದೆ. ಹೀಗಾಗಿ ಭಾರತದ 543 ಲೋಕಸಭಾ ಕ್ಷೇತ್ರಗಳಲ್ಲಿ ಹೊಸ ಪಾಸ್‌ಪೋರ್ಟ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ದೇಶಾದ್ಯಂತ ಸುಮಾರು 6,000 ಅಂಚೆ ಕಚೇರಿಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

9 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

10 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

11 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

12 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

13 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

13 hours ago