Mysore
23
overcast clouds

Social Media

ಬುಧವಾರ, 20 ಮೇ 2026
Light
Dark

ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುವೆ: ರಾಜಣ್ಣ

ನವದೆಹಲಿ: ಕಾಂಗ್ರೆಸ್‌ ಹೈಕಮಾಂಡ್‌ ಹೇಳಿದರೆ ನಾನು ನನ್ನ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಆದರೆ ನಾನು ಒನ್‌ ಮ್ಯಾನ್‌ ಒನ್‌ ಪೋಸ್ಟ್ಗೆ ಬದ್ಧನಾಗಿದ್ದೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಫೆಬ್ರವರಿ.14) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದಲಿತ ಸಮಾವೇಶಕ್ಕೆ ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಸಮಾವೇಶವನ್ನು ದಾವಣಗೆರೆ, ಮೈಸೂರು, ಹುಬ್ಬಳ್ಳಿ, ಬೆಂಗಳೂರು ಅಥವಾ ಚಿತ್ರದುರ್ಗದಲ್ಲಿ ನಡೆಸಲು ಆಲೋಚಿಸಲಾಗುತ್ತಿದೆ. ಅಲ್ಲದೇ ಈ ಸಮಾವೇಶದಲ್ಲಿ ಗ್ಯಾರಂಟಿ ಬಗ್ಗೆ ವಿಶ್ವಾಸ ಮೂಡಿಸಬೇಕಿದ್ದು, ಗ್ಯಾರಂಟಿ ಶಕ್ತಿ ತುಂಬಿದೆಯಾ ಎಂದು ತಿಳಿಯಬೇಕಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ನೀಡಲಾಗಿದೆ. ಇನ್ನೂ ಸಮಾವೇಶದ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಸಂಪೂರ್ಣವಾಗಿ ವಿವರಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ದಲಿತ ಸಿಎಂ ಕುರಿತು ಮಾತನಾಡಿದ ಅವರು, ಯಾವ ಸಮುದಾಯ ಬೇಕಾದರೂ ಸಿಎಂ ಸ್ಥಾನ ಕೇಳಬಹುದು. ಅದರಲ್ಲಿ ತಪ್ಪೇನಿದೆ, ಈ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತದೆ. ಸಿಎಂ ಘೊಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ ಎಂದು ಹೈಕಮಾಂಡ್‌ ಹೇಳಿದೆ ಎಂದು ತಿಳಿಸಿದರು.

Tags:
error: Content is protected !!