ನವದೆಹಲಿ: ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ನಾನು ನನ್ನ ಮಂತ್ರಿ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷನಾಗುತ್ತೇನೆ. ಆದರೆ ನಾನು ಒನ್ ಮ್ಯಾನ್ ಒನ್ ಪೋಸ್ಟ್ಗೆ ಬದ್ಧನಾಗಿದ್ದೇನೆ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಫೆಬ್ರವರಿ.14) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದಲಿತ ಸಮಾವೇಶಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಮಾವೇಶವನ್ನು ದಾವಣಗೆರೆ, ಮೈಸೂರು, ಹುಬ್ಬಳ್ಳಿ, ಬೆಂಗಳೂರು ಅಥವಾ ಚಿತ್ರದುರ್ಗದಲ್ಲಿ ನಡೆಸಲು ಆಲೋಚಿಸಲಾಗುತ್ತಿದೆ. ಅಲ್ಲದೇ ಈ ಸಮಾವೇಶದಲ್ಲಿ ಗ್ಯಾರಂಟಿ ಬಗ್ಗೆ ವಿಶ್ವಾಸ ಮೂಡಿಸಬೇಕಿದ್ದು, ಗ್ಯಾರಂಟಿ ಶಕ್ತಿ ತುಂಬಿದೆಯಾ ಎಂದು ತಿಳಿಯಬೇಕಿದೆ ಎಂದು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಲಾಗಿದೆ. ಇನ್ನೂ ಸಮಾವೇಶದ ಬಗ್ಗೆ ಎಐಸಿಸಿ ಅಧ್ಯಕ್ಷರಿಗೆ ಸಂಪೂರ್ಣವಾಗಿ ವಿವರಿಸಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ದಲಿತ ಸಿಎಂ ಕುರಿತು ಮಾತನಾಡಿದ ಅವರು, ಯಾವ ಸಮುದಾಯ ಬೇಕಾದರೂ ಸಿಎಂ ಸ್ಥಾನ ಕೇಳಬಹುದು. ಅದರಲ್ಲಿ ತಪ್ಪೇನಿದೆ, ಈ ಬಗ್ಗೆ ನಮ್ಮ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಸಿಎಂ ಘೊಷಣೆ ಮಾಡುವಾಗ ಪ್ರೆಸ್ ರಿಲೀಸ್ ಮಾಡಿದ್ದರು. ಎಂಪಿ ಚುನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷರು ಮುಂದುವರೆಯಲಿದ್ದಾರೆ ಎಂದು ಹೈಕಮಾಂಡ್ ಹೇಳಿದೆ ಎಂದು ತಿಳಿಸಿದರು.
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…