ದೇಶ- ವಿದೇಶ

ಕಕ್ಕಡ್‌ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ: ಬಾಂಬೆ ಹೈಕೋರ್ಟ್‌ಗೆ ಸಲ್ಮಾನ್ ಖಾನ್

ಮುಂಬೈ: ನೆರೆಯ ವ್ಯಕ್ತಿಯಾದ ಕೇತನ್‌ ಕಕ್ಕಡ್‌ ತಮ್ಮ ವಿರುದ್ಧ ಅಂತರ್ಜಾಲದಲ್ಲಿ ನೀಡಿರುವ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ತಮ್ಮ ವಿರುದ್ಧದ ಹೇಳಿಕೆಗಳನ್ನು ಹೊಂದಿರುವ ಕಕ್ಕಡ್‌ ಅವರ ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲು/ ಅಮಾನತುಗೊಳಿಸಲು ನಿರಾಕರಿಸಿದ ಸಿವಿಲ್ ನ್ಯಾಯಾಲಯವೊಂದರ ಮಧ್ಯಂತರ ಆದೇಶ ಪ್ರಶ್ನಿಸಿ ಸಲ್ಮಾನ್‌ ಖಾನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನಲ್ಲಿ, ಖಾನ್ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ರವಿ ಕದಂ, ಕಳೆದ ವಾರ ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ನಿರಾಕರಿಸಿರುವುದು ಸೂಕ್ತವಾಗಿಲ್ಲ ಎಂದರು.

ಪನ್ವೇಲ್‌ನಲ್ಲಿರುವ ಸಲ್ಮಾನ್‌ ಖಾನ್‌ ಅವರ ಫಾರ್ಮ್‌ಹೌಸ್‌ನ ಪಕ್ಕದಲ್ಲಿ ಕಕ್ಕಡ್ ಭೂಮಿ ಖರೀದಿಸಲು ಯತ್ನಿಸಿದ್ದರು. ಆದರೆ ಆ ವ್ಯವಹಾರವನ್ನು ಅಧಿಕಾರಿಗಳು ಕಾನೂನುಬಾಹಿರವೆಂದು ಪರಿಗಣಿಸಿ ರದ್ದುಗೊಳಿಸಿದ್ದರು. ಬಳಿಕ ಖಾನ್ ಮತ್ತು ಅವರ ಕುಟುಂಬ ಸದಸ್ಯರ ಆಜ್ಞೆಯ ಮೇರೆಗೆ ವ್ಯವಹಾರ ರದ್ದುಗೊಳಿಸಲಾಗಿದೆ ಎಂದು ಕಕ್ಕಡ್ ಸುಳ್ಳು ಮತ್ತು ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ದೂರಲಾಗಿದೆ.

ಕಕ್ಕಡ್‌ ಅಪ್‌ಲೋಡ್ ಮಾಡಿರುವ ವೀಡಿಯೊಗಳು ಊಹಾಪೋಹದಿಂದ ಕೂಡಿವೆ. ಅವು ಮಾನಹಾನಿಕರ ಮಾತ್ರವಲ್ಲದೆ ಸಲ್ಮಾನ್ ಖಾನ್ ವಿರುದ್ಧ ಕೋಮುಪ್ರಚೋದನೆ ಉಂಟು ಮಾಡುತ್ತವೆ. ವೀಡಿಯೋದಲ್ಲಿ, ಸಲ್ಮಾನ್ ಖಾನ್ ಅವರನ್ನು ಪ್ರತಿವಾದಿ ಕಕ್ಕಡ್ ಬಾಬರ್ ಮತ್ತು ಔರಂಗಜೇಬ್‌ಗೆ ಹೋಲಿಸಿದ್ದಾರೆ. ಅಯೋಧ್ಯೆ ಮಂದಿರ ನಿರ್ಮಿಸಲು 500 ವರ್ಷ ಹಿಡಿಯಿತು. ಇಲ್ಲಿ ಸಲ್ಮಾನ್ ಖಾನ್ ಗಣೇಶ ಮಂದಿರ ಮುಚ್ಚಲು ಯತ್ನಿಸಿದ್ದಾರೆ ಎಂದು ಕಕ್ಕಡ್‌ ಆರೋಪಿಸಿದ್ದಾರೆ. ಖಾನ್‌ ವಿರುದ್ಧ ಕಾಮೆಂಟ್‌ ಮಾಡಲು ಅವಕಾಶವಿರುವ ಲಕ್ಷಾಂತರ ವೀಕ್ಷಕರು ಈ ವೀಡಿಯೊಗಳನ್ನು ನೋಡುತ್ತಿದ್ದಾರೆ. ವೀಡಿಯೊಗಳು ಎಲ್ಲವನ್ನೂ ಕೋಮುವಾದಗೊಳಿಸಿವೆ. ಹಿಂದೂಗಳ ವಿರುದ್ಧ ಮುಸ್ಲಿಮರು ಎಂದು ಬಿಂಬಿಸಿವೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಸಿ ವಿ ಭಾಡಂಗ್ ಅವರು ಮಾನಹಾನಿಕರವೆಂದು ಆರೋಪಿಸಲಾದ ವೀಡಿಯೊಗಳ ಎಲ್ಲಾ ಪ್ರತಿಲೇಖನ (ಟ್ರಾನ್ಸ್‌ಕ್ರಿಪ್ಟ್‌) ಸಲ್ಲಿಸಲು ಸಲ್ಮಾನ್‌ ಖಾನ್‌ ಪರ ವಕೀಲ ಕದಂ ಅವರಿಗೆ ಸೂಚಿಸಿದರು. ಆಗಸ್ಟ್ 22ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

andolana

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

2 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

3 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

4 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

22 hours ago