ದೇಶ- ವಿದೇಶ

ಕಕ್ಕಡ್‌ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ: ಬಾಂಬೆ ಹೈಕೋರ್ಟ್‌ಗೆ ಸಲ್ಮಾನ್ ಖಾನ್

ಮುಂಬೈ: ನೆರೆಯ ವ್ಯಕ್ತಿಯಾದ ಕೇತನ್‌ ಕಕ್ಕಡ್‌ ತಮ್ಮ ವಿರುದ್ಧ ಅಂತರ್ಜಾಲದಲ್ಲಿ ನೀಡಿರುವ ಹೇಳಿಕೆ ಮಾನಹಾನಿಕರ ಮಾತ್ರವಲ್ಲ ಕೋಮು ಪ್ರಚೋದನಕಾರಿ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ತಮ್ಮ ವಿರುದ್ಧದ ಹೇಳಿಕೆಗಳನ್ನು ಹೊಂದಿರುವ ಕಕ್ಕಡ್‌ ಅವರ ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲು/ ಅಮಾನತುಗೊಳಿಸಲು ನಿರಾಕರಿಸಿದ ಸಿವಿಲ್ ನ್ಯಾಯಾಲಯವೊಂದರ ಮಧ್ಯಂತರ ಆದೇಶ ಪ್ರಶ್ನಿಸಿ ಸಲ್ಮಾನ್‌ ಖಾನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್‌ನಲ್ಲಿ, ಖಾನ್ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ರವಿ ಕದಂ, ಕಳೆದ ವಾರ ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ನಿರಾಕರಿಸಿರುವುದು ಸೂಕ್ತವಾಗಿಲ್ಲ ಎಂದರು.

ಪನ್ವೇಲ್‌ನಲ್ಲಿರುವ ಸಲ್ಮಾನ್‌ ಖಾನ್‌ ಅವರ ಫಾರ್ಮ್‌ಹೌಸ್‌ನ ಪಕ್ಕದಲ್ಲಿ ಕಕ್ಕಡ್ ಭೂಮಿ ಖರೀದಿಸಲು ಯತ್ನಿಸಿದ್ದರು. ಆದರೆ ಆ ವ್ಯವಹಾರವನ್ನು ಅಧಿಕಾರಿಗಳು ಕಾನೂನುಬಾಹಿರವೆಂದು ಪರಿಗಣಿಸಿ ರದ್ದುಗೊಳಿಸಿದ್ದರು. ಬಳಿಕ ಖಾನ್ ಮತ್ತು ಅವರ ಕುಟುಂಬ ಸದಸ್ಯರ ಆಜ್ಞೆಯ ಮೇರೆಗೆ ವ್ಯವಹಾರ ರದ್ದುಗೊಳಿಸಲಾಗಿದೆ ಎಂದು ಕಕ್ಕಡ್ ಸುಳ್ಳು ಮತ್ತು ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ದೂರಲಾಗಿದೆ.

ಕಕ್ಕಡ್‌ ಅಪ್‌ಲೋಡ್ ಮಾಡಿರುವ ವೀಡಿಯೊಗಳು ಊಹಾಪೋಹದಿಂದ ಕೂಡಿವೆ. ಅವು ಮಾನಹಾನಿಕರ ಮಾತ್ರವಲ್ಲದೆ ಸಲ್ಮಾನ್ ಖಾನ್ ವಿರುದ್ಧ ಕೋಮುಪ್ರಚೋದನೆ ಉಂಟು ಮಾಡುತ್ತವೆ. ವೀಡಿಯೋದಲ್ಲಿ, ಸಲ್ಮಾನ್ ಖಾನ್ ಅವರನ್ನು ಪ್ರತಿವಾದಿ ಕಕ್ಕಡ್ ಬಾಬರ್ ಮತ್ತು ಔರಂಗಜೇಬ್‌ಗೆ ಹೋಲಿಸಿದ್ದಾರೆ. ಅಯೋಧ್ಯೆ ಮಂದಿರ ನಿರ್ಮಿಸಲು 500 ವರ್ಷ ಹಿಡಿಯಿತು. ಇಲ್ಲಿ ಸಲ್ಮಾನ್ ಖಾನ್ ಗಣೇಶ ಮಂದಿರ ಮುಚ್ಚಲು ಯತ್ನಿಸಿದ್ದಾರೆ ಎಂದು ಕಕ್ಕಡ್‌ ಆರೋಪಿಸಿದ್ದಾರೆ. ಖಾನ್‌ ವಿರುದ್ಧ ಕಾಮೆಂಟ್‌ ಮಾಡಲು ಅವಕಾಶವಿರುವ ಲಕ್ಷಾಂತರ ವೀಕ್ಷಕರು ಈ ವೀಡಿಯೊಗಳನ್ನು ನೋಡುತ್ತಿದ್ದಾರೆ. ವೀಡಿಯೊಗಳು ಎಲ್ಲವನ್ನೂ ಕೋಮುವಾದಗೊಳಿಸಿವೆ. ಹಿಂದೂಗಳ ವಿರುದ್ಧ ಮುಸ್ಲಿಮರು ಎಂದು ಬಿಂಬಿಸಿವೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಸಿ ವಿ ಭಾಡಂಗ್ ಅವರು ಮಾನಹಾನಿಕರವೆಂದು ಆರೋಪಿಸಲಾದ ವೀಡಿಯೊಗಳ ಎಲ್ಲಾ ಪ್ರತಿಲೇಖನ (ಟ್ರಾನ್ಸ್‌ಕ್ರಿಪ್ಟ್‌) ಸಲ್ಲಿಸಲು ಸಲ್ಮಾನ್‌ ಖಾನ್‌ ಪರ ವಕೀಲ ಕದಂ ಅವರಿಗೆ ಸೂಚಿಸಿದರು. ಆಗಸ್ಟ್ 22ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

andolana

Recent Posts

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

9 mins ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

12 mins ago

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…

13 mins ago

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…

15 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…

23 mins ago

ಬೈಕ್‌ಗೆ ಲಾರಿ ಡಿಕ್ಕಿ : ಸವಾರ ಸಾವು, ಮತ್ತೊರ್ವ ಗಂಭೀರ

ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…

27 mins ago