ದೇಶ- ವಿದೇಶ

ನಕಲಿ ಮದ್ಯ ಸೇವನೆ ದುರಂತ: ಸಂತ್ರಸ್ತರನ್ನು ಭೇಟಿಯಾದ ಕಮಲ್‌

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಈ ನಡುವೆ ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು (ಜೂನ್‌. 23) ಈ ಎಲ್ಲಾ ಆಸ್ಪತ್ರೆಗಳಿಗೆ ಮಕ್ಕಳ್‌ ನೀಧಿ ಮೈಯಂ (ಎಂಎನ್‌ಎಂ) ಮುಖ್ಯಸ್ಥ ಹಾಗೂ ನಟ ಕಮಲ್‌ ಹಾಸನ್‌ ಅವರು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.

ಬಳಿಕ ಮಾತನಾಡಿ ಅವರು, ಈ ಸಂತ್ರಸ್ತರು ತಮ್ಮ ಮಿತಿಯನ್ನು ಮೀರಿದ್ದಾರೆ ಮತ್ತು ಅವರು ಅಸಡ್ಡೆ ಹೊಂದಿದ್ದಾರೆಂದು ಅರ್ಥಮಾಡಿಕೊಳ್ಳಬೇಕು. ಅವರು ಜಾಗರೂಕರಾಗಿರಬೇಕು. ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಅವರಿಗೆ ಸಲಹೆ ನೀಡುವ ಮನೋವೈದ್ಯಕೀಯ ಕೇಂದ್ರಗಳನ್ನು ರಚಿಸಬೇಕೆಂಬುದು ನನ್ನ ಮನವಿಯಾಗಿದೆ… ಅದು ಸಾಂದರ್ಭಿಕವಾಗಿ ಕುಡಿಯಬೇಕು, ಯಾವುದೇ ರೂಪದಲ್ಲಿ ಮಿತಿ ಮೀರಿದರೆ ಅದು ಕೆಟ್ಟದ್ದಾಗಿರುತ್ತದೆ ಎಂದು ಅವರು ಅರ್ಥಮಾಡಿಕೊಳ್ಳಬೇಕು ಎಂದು ಕಮಲ್‌ ಹೇಳಿದ್ದಾರೆ.

ಜೂನ್‌.19ರಂದು ಕಲ್ಲಕುರಿಚಿಯಲ್ಲಿ ನಕಲಿ ಮದ್ಯಸೇವನೆಯಿಂದ 50ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಈ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಮತ್ತು ಮೃತರ ಸಂಬಂಧಿಕರಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದೆ.

https://x.com/ANI/status/1804803885422493735

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

1 hour ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

1 hour ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

1 hour ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

1 hour ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

1 hour ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

1 hour ago