ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ. ಈ ನಡುವೆ ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ 185 ಮಂದಿ ಅಸ್ವಸ್ಥರಾಗಿದ್ದು, ಕಲ್ಲಕುರಿಚ್ಚಿ, ಪುದುಚೇರಿ, ಸೇಲಂ ಹಾಗೂ ವಿಲ್ಲುಪುರಂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು (ಜೂನ್. 23) ಈ ಎಲ್ಲಾ ಆಸ್ಪತ್ರೆಗಳಿಗೆ ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಮುಖ್ಯಸ್ಥ ಹಾಗೂ ನಟ ಕಮಲ್ ಹಾಸನ್ ಅವರು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.
ಬಳಿಕ ಮಾತನಾಡಿ ಅವರು, ಈ ಸಂತ್ರಸ್ತರು ತಮ್ಮ ಮಿತಿಯನ್ನು ಮೀರಿದ್ದಾರೆ ಮತ್ತು ಅವರು ಅಸಡ್ಡೆ ಹೊಂದಿದ್ದಾರೆಂದು ಅರ್ಥಮಾಡಿಕೊಳ್ಳಬೇಕು. ಅವರು ಜಾಗರೂಕರಾಗಿರಬೇಕು. ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಅವರಿಗೆ ಸಲಹೆ ನೀಡುವ ಮನೋವೈದ್ಯಕೀಯ ಕೇಂದ್ರಗಳನ್ನು ರಚಿಸಬೇಕೆಂಬುದು ನನ್ನ ಮನವಿಯಾಗಿದೆ… ಅದು ಸಾಂದರ್ಭಿಕವಾಗಿ ಕುಡಿಯಬೇಕು, ಯಾವುದೇ ರೂಪದಲ್ಲಿ ಮಿತಿ ಮೀರಿದರೆ ಅದು ಕೆಟ್ಟದ್ದಾಗಿರುತ್ತದೆ ಎಂದು ಅವರು ಅರ್ಥಮಾಡಿಕೊಳ್ಳಬೇಕು ಎಂದು ಕಮಲ್ ಹೇಳಿದ್ದಾರೆ.
ಜೂನ್.19ರಂದು ಕಲ್ಲಕುರಿಚಿಯಲ್ಲಿ ನಕಲಿ ಮದ್ಯಸೇವನೆಯಿಂದ 50ಕ್ಕೂ ಅಧಿಕ ಮಂದಿ ಮೃತರಾಗಿದ್ದು, ಈ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಮತ್ತು ಮೃತರ ಸಂಬಂಧಿಕರಿಗೆ ತಲಾ 10 ಲಕ್ಷ ಪರಿಹಾರ ಘೋಷಿಸಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…