kamal hasan
ಬೆಂಗಳೂರು : ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿ ಕನ್ನಡಿಗರಿಂದ ಪ್ರತಿಭಟನೆ ಹಾಗೂ ಛೀಮಾರಿಗೆ ಒಳಗಾಗಿರುವ ಬಹುಭಾಷ ನಟ ಕಮಲ್ ಹಾಸನ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ.
ಇಂದು ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ದು ಸರಿ ಅಲ್ಲ ಎಂದು ಸಾಬೀತಾಗುವವರೆಗೂ ನಾನು ಯಾರ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.
ನಾನು ಸಂವಿಧಾನ ಮತ್ತು ಕಾನೂನಿನಲ್ಲಿ ನಂಬಿಕೆಯುಳ್ಳವನು. ನನ್ನ ಪ್ರೀತಿ ಕರ್ನಾಟಕ,ಕನ್ನಡ,ತೆಲುಗು ಹಾಗೂ ಮಲಯಾಳಂಗೆ ಇದ್ದೇ ಇದೆ. ಅಜೆಂಡಾ ಇಟ್ಟು ರಾಜಕಾರಣ ಮಾಡುವವರನ್ನು ಹೊರತುಪಡಿಸಿ ಯಾರೂ ಇದನ್ನು ಅಲ್ಲಗೆಳೆಯುವುದಿಲ್ಲ ಎಂದಿದ್ದಾರೆ.
ಒಂದು ವೇಳೆ ನಾನಾಡಿದ್ದು ತಪ್ಪಾಗಿದ್ದರೆ ಕ್ಷಮೆ ಕೇಳುತ್ತೇನೆ. ಇಲ್ಲದಿದ್ದರೇ ಇಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಹಠಮಾರಿ ಧೋರಣೆಯನ್ನು ಮುಂದುವರೆಸಿದ್ದಾರೆ ಎಂದು ಸಾಬೀತಾಗುತ್ತಿದೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…