ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಲೇವಡಿ ಮಾಡಿದ್ದಾರೆ.
ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ದೇವಾನುದೇವತೆಗಳನ್ನು ತಮ್ಮ ಬ್ರಾಂಡ್ ಅಂಬಾಸಿಡರ್ ಅನ್ನಾಗಿ ಮಾಡಿಕೊಂಡಿದ್ದಾರೆ. ಶಿವನು ಆಶಿರ್ವಾದ ಮಾಡಿ ಎತ್ತಿ ಕೈ ಕಾಂಗ್ರೆಸ್ದು ಎಂಬುದು ಅವರ ವಾದವಾಗಿತ್ತು ಎಂದು ಹೇಳಿದ್ದಾರೆ. ಇದು ನಮ್ಮೆಲ್ಲರಿಗೂ ನಗುವನ್ನು ಉಂಟುಮಾಡಿತ್ತು ಎಂದು ಲಘುವಾಗಿ ಟೀಕಿಸಿದ್ದಾರೆ.
ರಾಜಕುಮಾರ ಸಂಸತ್ಗೆ ಬಂದಾಗ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿಲ್ಲ ಎಂಬುದು ಅವರ ವಾದವಾಗಿತ್ತು. ಆದ್ದರಿಂದಲೇ ಅವರು ಈ ಸ್ಟ್ಯಾಂಡಪ್ ಕಾಮಿಡಿ ಮಾಡಿದರು ಎಂದು ದೂರಿದರು.
ರಾಹುಲ್ ಗಾಂಧಿ ಅವರು ಹಿಂದೂ ಧರ್ಮ, ಹಿಂದೂ ಸಮುದಾಯ ಹಾಗೂ ದೇವರುಗಳನ್ನು ಅವಮಾನಿಸಿದ್ದಾರೆ. ಇವರೆಲ್ಲರೂ ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದು ಹಿಂಸಾತ್ಮಕ ಭಾವನೆಗಳನ್ನು ಮೂಡಿಸಲು ಪೇರೇಪಿಸಿದ್ದಾರೆ ಎಂದು ಆರೋಪಿಸಿದ ಕಂಗನಾ, ರಾಹುಲ್ ಗಾಂಧಿ ದೇಶದ ಜನರ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…