ನದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಒಳ್ಳೆಯ ಸ್ಟಾಂಡಪ್ ಕಾಮಿಡಿ ಮಾಡಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಲೇವಡಿ ಮಾಡಿದ್ದಾರೆ.
ಲೋಕಸಭಾ ಮೊದಲ ದಿನದ ಅದಿವೇಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ದೇವಾನುದೇವತೆಗಳನ್ನು ತಮ್ಮ ಬ್ರಾಂಡ್ ಅಂಬಾಸಿಡರ್ ಅನ್ನಾಗಿ ಮಾಡಿಕೊಂಡಿದ್ದಾರೆ. ಶಿವನು ಆಶಿರ್ವಾದ ಮಾಡಿ ಎತ್ತಿ ಕೈ ಕಾಂಗ್ರೆಸ್ದು ಎಂಬುದು ಅವರ ವಾದವಾಗಿತ್ತು ಎಂದು ಹೇಳಿದ್ದಾರೆ. ಇದು ನಮ್ಮೆಲ್ಲರಿಗೂ ನಗುವನ್ನು ಉಂಟುಮಾಡಿತ್ತು ಎಂದು ಲಘುವಾಗಿ ಟೀಕಿಸಿದ್ದಾರೆ.
ರಾಜಕುಮಾರ ಸಂಸತ್ಗೆ ಬಂದಾಗ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿಲ್ಲ ಎಂಬುದು ಅವರ ವಾದವಾಗಿತ್ತು. ಆದ್ದರಿಂದಲೇ ಅವರು ಈ ಸ್ಟ್ಯಾಂಡಪ್ ಕಾಮಿಡಿ ಮಾಡಿದರು ಎಂದು ದೂರಿದರು.
ರಾಹುಲ್ ಗಾಂಧಿ ಅವರು ಹಿಂದೂ ಧರ್ಮ, ಹಿಂದೂ ಸಮುದಾಯ ಹಾಗೂ ದೇವರುಗಳನ್ನು ಅವಮಾನಿಸಿದ್ದಾರೆ. ಇವರೆಲ್ಲರೂ ಹಿಂಸೆಗೆ ಪ್ರಚೋದನೆ ನೀಡುತ್ತಾರೆ ಎಂದು ಹಿಂಸಾತ್ಮಕ ಭಾವನೆಗಳನ್ನು ಮೂಡಿಸಲು ಪೇರೇಪಿಸಿದ್ದಾರೆ ಎಂದು ಆರೋಪಿಸಿದ ಕಂಗನಾ, ರಾಹುಲ್ ಗಾಂಧಿ ದೇಶದ ಜನರ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…