ದೇಶ- ವಿದೇಶ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತ ಸಿನಿಮಾ ಬಿಡುಗಡೆ ಯಾವಾಗ ಗೊತ್ತಾ.?

ನವದೆಹಲಿ: ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಅವರು, ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತಾದ ಎಮರ್ಜೆನ್ಸಿ ಸಿನಿಮಾ ನಿರ್ಮಾಣ ಮತ್ತು ನಿರ್ದೇಶನ ಮಾಡಿದ್ದು, ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಿಸಿದ್ದಾರೆ.

ನಟಿ ಹಾಗೂ ನಿರ್ದೇಶಕಿ ಕಂಗನಾ ರಾಣಾವತ್‌ ಅವರು ಈಗ ಬಿಜೆಪಿ ಸಂಸದೆಯಾಗಿದ್ದಾರೆ. ಅನೇಕ ಸಿನಿಮಾಗಳಲ್ಲಿ ನಟಿಸಿ, ನಿರ್ದೇಶಕಿಯಾಗಿ ಗಮನ ಸೆಳೆದಿದ್ದ ಕಂಗನಾ ಇನ್ನು ಮುಂದೆ ಸಂಸದೆಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಕಂಗನಾ ಚುನಾವಣೆಗೂ ಸ್ಪರ್ಧಿಸುವ ಮುಂಚೆ ಇಂದಿರಾ ಗಾಂಧಿ ಕುರಿತಾದ ಎಮರ್ಜೆನ್ಸಿ ಸಿನಿಮಾದಲ್ಲಿ ನಟಿಸಿದ್ದರು. ಚುನಾವಣೆ ಕಾರಣಕ್ಕೆ ಈ ಸಿನಿಮಾದ ಬಿಡುಗಡೆ ಮುಂದೂಡಲಾಗಿತ್ತು. ಇದೀಗ ಸಿನಿಮಾದ ಬಿಡುಗಡೆಗೆ ದಿನಾಂಕ ಘೋಷಿಸಿದ್ದಾರೆ.

ಎಮರ್ಜೆನ್ಸಿ ಸಿನಿಮಾವನ್ನು ಕಂಗನಾ ಸೆಪ್ಟೆಂಬರ್.‌6ರಂದು ತೆರೆಗೆ ತರಲಿದ್ದಾರೆ. ಕಂಗನಾ ಸಂಸದೆಯಾಗಿ ಆಯ್ಕೆಯಾದ ಬಳಿಕ ಈ ಸಿನಿಮಾ ಬಿಡುಗಡೆ ಆಗುತ್ತೋ, ಇಲ್ಲವೋ ಎಂಬ ಅನುಮಾನ ಶುರುವಾಗಿತ್ತು. ಆದರೆ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕವನ್ನು ಕಂಗನಾ ಘೋಷಣೆ ಮಾಡಿದ್ದಾರೆ. ಸಿನಿಮಾದಲ್ಲಿ ಕಂಗನಾ ಇಂದಿರಾಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಕಂಗನಾ ರಾಣಾವತ್‌ ಅವರು, ಭಾರತ ಪ್ರಜಾಪ್ರಭುತ್ವದ ಕರಾಳ ಅಧ್ಯಾಯಕ್ಕೆ ಐವತ್ತು ವರ್ಷವಾದ ಹಿನ್ನೆಲೆಯಲ್ಲಿ ಎಮರ್ಜೆನ್ಸಿ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸುತ್ತಿದ್ದೇನೆ. ಇದು ಸ್ವಾತಂತ್ರ್ಯ ಭಾರತದ ಅತ್ಯಂತ ವಿವಾದಾತ್ಮಕ ನಿರ್ಣಯದ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಎಂದು ಕಂಗನಾ ರಾಣಾವತ್‌ ತಿಳಿಸಿದ್ದಾರೆ.

ಇನ್ನೂ ಕಂಗನಾ ಸಿನಿಮಾಗಳು ಒಂದರ ಹಿಂದೊಂದು ಸೋಲು ಕಂಡಿವೆ. ಈ ಸಿನಿಮಾದ ಮೂಲಕ ಕಂಗನಾ ಮತ್ತೆ ಗೆಲುವಿನ ಹಾದಿಗೆ ಮರಳಿದ್ದಾರೆ ಎನ್ನಲಾಗಿದೆ.

ಬಹಳ ತಿಂಗಳ ಹಿಂದೆ ಸಿನಿಮಾದ ಸಣ್ಣ ಟೀಸರ್‌ ಬಿಡುಗಡೆ ಆಗಿತ್ತು. ಟೀಸರ್‌ನಲ್ಲಿ ಕಂಗನಾ ರಾಣಾವತ್‌ ಅಭಿನಯ ಅದ್ಭುತವಾಗಿತ್ತು. ಆ ಟೀಸರ್‌ನಿಂದಲೇ ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

7 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

9 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

9 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

9 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

9 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

11 hours ago