ದೇಶ- ವಿದೇಶ

ರಾಹಲ್‌ ಗಾಂಧಿ ಡ್ರಗ್ಸ್‌ ಸೇವಿಸಿ ಸದನಕ್ಕೆ ಬರುತ್ತಾರೆ: ಸಂಸದೆ ಕಂಗನಾ ರಣಾವತ್‌ ದೂರು

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಂಸತ್‌ಗೆ ಡ್ರಗ್ಸ್‌ ಅಥವಾ ಮಧ್ಯ ಸೇವಿಸಿ ಬರುತ್ತಾರೆ ಎಂದು ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್‌ ಹೇಳಿದ್ದಾರೆ.

ಸದ್ಯ ಈ ಹೇಳಿಕೆಯೂ ಭಾರೀ ವಿವಾದ ಸೃಷ್ಠಿಸಿದೆ. ರಾಗಾ ಅವರು ಮಾದಕ ವಸ್ತು ಸೇವಿಸಿ ಸಂಸತ್‌ಗೆ ಬರುತ್ತಾರೆ ಅವರನ್ನು ತಪಾಸಣೆಗೆ ಒಳಪಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದಲ್ಲಿ ಚಕ್ರವ್ಯೂಹ ರೀತಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಿರ್ಗತಿಕರು, ಬಡವರು, ಯುವಕರ ವಿರುದ್ಧ ಪದ್ಮವ್ಯೂಹ ರಚಿಸಿ ಭಯದ ವಾತಾವರಣ ರೂಪಿಸುತ್ತಿದ್ದಾರೆ ಇದನ್ನು ನಾವು ಜಾತಿ ಗಣತಿ ನಡೆಸುವ ಮೂಲಕ ಇದನ್ನು ಭೇದಿಸುತ್ತೇವೆ ಎಂದು ಹೇಳಿದ್ದರು.

https://x.com/peepoye_/status/1818535272189247591

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕಂಗನಾ ಅವರು, ಪ್ರಧಾನಿ ಅವರನ್ನು ಸಂವಿಧಾನದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದಾರೆ. ಹೀಗಿದ್ದರೇ ರಾಗಾ ಅವರು ಪ್ರಜಾಪ್ರಭೂತ್ವವನ್ನು ಗೌರವಿಸಿದಂತೆಯಾ? ಸಂವಿಧಾನವನ್ನು ಗೌರವಿಸಿದಂತೆಯಾ? ಹೀಗೆ ಮುಂದುವರೆದಲ್ಲಿ ಮುಂದೊಂದು ದಿನ ಪ್ರಧಾನಿ ಅವರನ್ನು ತಮ್ಮ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ರಾಗಾ ದೂರುತ್ತಾರೆ ಎಂದು ಕಿಡಿಕಾರಿದ್ದಾರೆ.

ರಾಹುಲ್‌ ಗಾಂಧಿ ಅವರಿಗೆ ಸಂಸತ್‌ನ ನೀತಿ ನಿಯಮಗಳ ಅರಿವಿಲ್ಲ ಎಂದು ನನಗನಿಸುತ್ತದೆ. ಸಂಸತ್‌ನಲ್ಲಿ ವ್ಯಕ್ತಿಯೊಬ್ಬರು ಈಶ್ವರ, ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದಾದರೇ ಅವರನ್ನು ಮಾಧಕ ವ್ಯಸನ ಪರೀಕ್ಷೆಗೆ ಒಳಪಡಿಸಬೇಕು ಎಂದು ಅನಿಸುವುದಿಲ್ಲವೇ? ಅಂತವರು ಮಾದಕ ವಸ್ತು ಅಥವಾ ಮದ್ಯ ಸೇವಿಸಿ ಮತ್ತಿನಲ್ಲೇ ಸಂಸತ್‌ಗೆ ಬರುತ್ತಾರೆ. ಇದು ಉತ್ತಮ ನಡೆ ಎಂದು ತೋರುವುದಿಲ್ಲ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

20 mins ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

33 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

46 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

1 hour ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 hour ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago