ದೇಶ- ವಿದೇಶ

ರಾಹಲ್‌ ಗಾಂಧಿ ಡ್ರಗ್ಸ್‌ ಸೇವಿಸಿ ಸದನಕ್ಕೆ ಬರುತ್ತಾರೆ: ಸಂಸದೆ ಕಂಗನಾ ರಣಾವತ್‌ ದೂರು

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಂಸತ್‌ಗೆ ಡ್ರಗ್ಸ್‌ ಅಥವಾ ಮಧ್ಯ ಸೇವಿಸಿ ಬರುತ್ತಾರೆ ಎಂದು ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್‌ ಹೇಳಿದ್ದಾರೆ.

ಸದ್ಯ ಈ ಹೇಳಿಕೆಯೂ ಭಾರೀ ವಿವಾದ ಸೃಷ್ಠಿಸಿದೆ. ರಾಗಾ ಅವರು ಮಾದಕ ವಸ್ತು ಸೇವಿಸಿ ಸಂಸತ್‌ಗೆ ಬರುತ್ತಾರೆ ಅವರನ್ನು ತಪಾಸಣೆಗೆ ಒಳಪಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದಲ್ಲಿ ಚಕ್ರವ್ಯೂಹ ರೀತಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಿರ್ಗತಿಕರು, ಬಡವರು, ಯುವಕರ ವಿರುದ್ಧ ಪದ್ಮವ್ಯೂಹ ರಚಿಸಿ ಭಯದ ವಾತಾವರಣ ರೂಪಿಸುತ್ತಿದ್ದಾರೆ ಇದನ್ನು ನಾವು ಜಾತಿ ಗಣತಿ ನಡೆಸುವ ಮೂಲಕ ಇದನ್ನು ಭೇದಿಸುತ್ತೇವೆ ಎಂದು ಹೇಳಿದ್ದರು.

https://x.com/peepoye_/status/1818535272189247591

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕಂಗನಾ ಅವರು, ಪ್ರಧಾನಿ ಅವರನ್ನು ಸಂವಿಧಾನದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದಾರೆ. ಹೀಗಿದ್ದರೇ ರಾಗಾ ಅವರು ಪ್ರಜಾಪ್ರಭೂತ್ವವನ್ನು ಗೌರವಿಸಿದಂತೆಯಾ? ಸಂವಿಧಾನವನ್ನು ಗೌರವಿಸಿದಂತೆಯಾ? ಹೀಗೆ ಮುಂದುವರೆದಲ್ಲಿ ಮುಂದೊಂದು ದಿನ ಪ್ರಧಾನಿ ಅವರನ್ನು ತಮ್ಮ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ರಾಗಾ ದೂರುತ್ತಾರೆ ಎಂದು ಕಿಡಿಕಾರಿದ್ದಾರೆ.

ರಾಹುಲ್‌ ಗಾಂಧಿ ಅವರಿಗೆ ಸಂಸತ್‌ನ ನೀತಿ ನಿಯಮಗಳ ಅರಿವಿಲ್ಲ ಎಂದು ನನಗನಿಸುತ್ತದೆ. ಸಂಸತ್‌ನಲ್ಲಿ ವ್ಯಕ್ತಿಯೊಬ್ಬರು ಈಶ್ವರ, ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದಾದರೇ ಅವರನ್ನು ಮಾಧಕ ವ್ಯಸನ ಪರೀಕ್ಷೆಗೆ ಒಳಪಡಿಸಬೇಕು ಎಂದು ಅನಿಸುವುದಿಲ್ಲವೇ? ಅಂತವರು ಮಾದಕ ವಸ್ತು ಅಥವಾ ಮದ್ಯ ಸೇವಿಸಿ ಮತ್ತಿನಲ್ಲೇ ಸಂಸತ್‌ಗೆ ಬರುತ್ತಾರೆ. ಇದು ಉತ್ತಮ ನಡೆ ಎಂದು ತೋರುವುದಿಲ್ಲ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

11 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

11 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago