ದೇಶ- ವಿದೇಶ

ರಾಹಲ್‌ ಗಾಂಧಿ ಡ್ರಗ್ಸ್‌ ಸೇವಿಸಿ ಸದನಕ್ಕೆ ಬರುತ್ತಾರೆ: ಸಂಸದೆ ಕಂಗನಾ ರಣಾವತ್‌ ದೂರು

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಂಸತ್‌ಗೆ ಡ್ರಗ್ಸ್‌ ಅಥವಾ ಮಧ್ಯ ಸೇವಿಸಿ ಬರುತ್ತಾರೆ ಎಂದು ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್‌ ಹೇಳಿದ್ದಾರೆ.

ಸದ್ಯ ಈ ಹೇಳಿಕೆಯೂ ಭಾರೀ ವಿವಾದ ಸೃಷ್ಠಿಸಿದೆ. ರಾಗಾ ಅವರು ಮಾದಕ ವಸ್ತು ಸೇವಿಸಿ ಸಂಸತ್‌ಗೆ ಬರುತ್ತಾರೆ ಅವರನ್ನು ತಪಾಸಣೆಗೆ ಒಳಪಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದಲ್ಲಿ ಚಕ್ರವ್ಯೂಹ ರೀತಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಿರ್ಗತಿಕರು, ಬಡವರು, ಯುವಕರ ವಿರುದ್ಧ ಪದ್ಮವ್ಯೂಹ ರಚಿಸಿ ಭಯದ ವಾತಾವರಣ ರೂಪಿಸುತ್ತಿದ್ದಾರೆ ಇದನ್ನು ನಾವು ಜಾತಿ ಗಣತಿ ನಡೆಸುವ ಮೂಲಕ ಇದನ್ನು ಭೇದಿಸುತ್ತೇವೆ ಎಂದು ಹೇಳಿದ್ದರು.

https://x.com/peepoye_/status/1818535272189247591

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕಂಗನಾ ಅವರು, ಪ್ರಧಾನಿ ಅವರನ್ನು ಸಂವಿಧಾನದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದಾರೆ. ಹೀಗಿದ್ದರೇ ರಾಗಾ ಅವರು ಪ್ರಜಾಪ್ರಭೂತ್ವವನ್ನು ಗೌರವಿಸಿದಂತೆಯಾ? ಸಂವಿಧಾನವನ್ನು ಗೌರವಿಸಿದಂತೆಯಾ? ಹೀಗೆ ಮುಂದುವರೆದಲ್ಲಿ ಮುಂದೊಂದು ದಿನ ಪ್ರಧಾನಿ ಅವರನ್ನು ತಮ್ಮ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ರಾಗಾ ದೂರುತ್ತಾರೆ ಎಂದು ಕಿಡಿಕಾರಿದ್ದಾರೆ.

ರಾಹುಲ್‌ ಗಾಂಧಿ ಅವರಿಗೆ ಸಂಸತ್‌ನ ನೀತಿ ನಿಯಮಗಳ ಅರಿವಿಲ್ಲ ಎಂದು ನನಗನಿಸುತ್ತದೆ. ಸಂಸತ್‌ನಲ್ಲಿ ವ್ಯಕ್ತಿಯೊಬ್ಬರು ಈಶ್ವರ, ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದಾದರೇ ಅವರನ್ನು ಮಾಧಕ ವ್ಯಸನ ಪರೀಕ್ಷೆಗೆ ಒಳಪಡಿಸಬೇಕು ಎಂದು ಅನಿಸುವುದಿಲ್ಲವೇ? ಅಂತವರು ಮಾದಕ ವಸ್ತು ಅಥವಾ ಮದ್ಯ ಸೇವಿಸಿ ಮತ್ತಿನಲ್ಲೇ ಸಂಸತ್‌ಗೆ ಬರುತ್ತಾರೆ. ಇದು ಉತ್ತಮ ನಡೆ ಎಂದು ತೋರುವುದಿಲ್ಲ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

2 hours ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

3 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

4 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

5 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

6 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

7 hours ago