ದೇಶ- ವಿದೇಶ

ರಾಹಲ್‌ ಗಾಂಧಿ ಡ್ರಗ್ಸ್‌ ಸೇವಿಸಿ ಸದನಕ್ಕೆ ಬರುತ್ತಾರೆ: ಸಂಸದೆ ಕಂಗನಾ ರಣಾವತ್‌ ದೂರು

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಂಸತ್‌ಗೆ ಡ್ರಗ್ಸ್‌ ಅಥವಾ ಮಧ್ಯ ಸೇವಿಸಿ ಬರುತ್ತಾರೆ ಎಂದು ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್‌ ಹೇಳಿದ್ದಾರೆ.

ಸದ್ಯ ಈ ಹೇಳಿಕೆಯೂ ಭಾರೀ ವಿವಾದ ಸೃಷ್ಠಿಸಿದೆ. ರಾಗಾ ಅವರು ಮಾದಕ ವಸ್ತು ಸೇವಿಸಿ ಸಂಸತ್‌ಗೆ ಬರುತ್ತಾರೆ ಅವರನ್ನು ತಪಾಸಣೆಗೆ ಒಳಪಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದಲ್ಲಿ ಚಕ್ರವ್ಯೂಹ ರೀತಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಿರ್ಗತಿಕರು, ಬಡವರು, ಯುವಕರ ವಿರುದ್ಧ ಪದ್ಮವ್ಯೂಹ ರಚಿಸಿ ಭಯದ ವಾತಾವರಣ ರೂಪಿಸುತ್ತಿದ್ದಾರೆ ಇದನ್ನು ನಾವು ಜಾತಿ ಗಣತಿ ನಡೆಸುವ ಮೂಲಕ ಇದನ್ನು ಭೇದಿಸುತ್ತೇವೆ ಎಂದು ಹೇಳಿದ್ದರು.

https://x.com/peepoye_/status/1818535272189247591

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕಂಗನಾ ಅವರು, ಪ್ರಧಾನಿ ಅವರನ್ನು ಸಂವಿಧಾನದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದಾರೆ. ಹೀಗಿದ್ದರೇ ರಾಗಾ ಅವರು ಪ್ರಜಾಪ್ರಭೂತ್ವವನ್ನು ಗೌರವಿಸಿದಂತೆಯಾ? ಸಂವಿಧಾನವನ್ನು ಗೌರವಿಸಿದಂತೆಯಾ? ಹೀಗೆ ಮುಂದುವರೆದಲ್ಲಿ ಮುಂದೊಂದು ದಿನ ಪ್ರಧಾನಿ ಅವರನ್ನು ತಮ್ಮ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದು ರಾಗಾ ದೂರುತ್ತಾರೆ ಎಂದು ಕಿಡಿಕಾರಿದ್ದಾರೆ.

ರಾಹುಲ್‌ ಗಾಂಧಿ ಅವರಿಗೆ ಸಂಸತ್‌ನ ನೀತಿ ನಿಯಮಗಳ ಅರಿವಿಲ್ಲ ಎಂದು ನನಗನಿಸುತ್ತದೆ. ಸಂಸತ್‌ನಲ್ಲಿ ವ್ಯಕ್ತಿಯೊಬ್ಬರು ಈಶ್ವರ, ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದಾದರೇ ಅವರನ್ನು ಮಾಧಕ ವ್ಯಸನ ಪರೀಕ್ಷೆಗೆ ಒಳಪಡಿಸಬೇಕು ಎಂದು ಅನಿಸುವುದಿಲ್ಲವೇ? ಅಂತವರು ಮಾದಕ ವಸ್ತು ಅಥವಾ ಮದ್ಯ ಸೇವಿಸಿ ಮತ್ತಿನಲ್ಲೇ ಸಂಸತ್‌ಗೆ ಬರುತ್ತಾರೆ. ಇದು ಉತ್ತಮ ನಡೆ ಎಂದು ತೋರುವುದಿಲ್ಲ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago