ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ.
ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘಿಸಿದ ಅವರು, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡರೂ ನಮ್ಮ ಮಕ್ಕಳು ಟೆಕ್ವಲ್ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ ಅವರು ತಮ್ಮ ನೆಲದ ಭಾಷೆ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಎಂಬ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠಶಾಲೆ ಆರಂಭ ಮಾಡಿದರು ಎಂದು ನೆನೆಪಿಸಿದರು.
ಇದನ್ನು ಓದಿ: ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್ ಟಾಂಗ್
ಕನ್ನಡ ಪಾಠಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸುತ್ತಿದ್ದಾರೆ, ಕನ್ನಡ ಓದು, ಬರಹ, ಮಾತನಾಡುವುದು ಕಲಿಸುತ್ತಿದ್ದಾರೆ. ಈಗ ಆ ಪಾಠಶಾಲೆಯಲ್ಲಿ ಒಂದು ಸಾವಿರ ಮಕ್ಕಳಿಗೆ ಕನ್ನಡ ಭಾಷೆ ಕಲಿಸುವ ಕೆಲಸವಾಗುತ್ತಿದೆ. ಈ ಮೂಲಕ ದುಬೈನಲ್ಲಿ ಇರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ ಎಂದರು.
ಮನ್ಕೀ ಬಾತ್ನಲ್ಲಿ ಮೋದಿ ಅವರು, ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ)ಯ ಕಾರ್ಯ ಚಟುವಟಿಕೆಗಳ ಬಗ್ಗೆ ಹೊಗಳಿದ್ದು ವಿಶೇಷವಾಗಿತ್ತು. ಐಐಎಸ್ಸಿಯಲ್ಲಿ ಕೇವಲ ವಿಜ್ಞಾನವನ್ನು ಕಲಿಸುವುದು ಮಾತ್ರವಲ್ಲ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸುವ ಸಂಗೀತ ತರಗತಿಗಳನ್ನು ನಡೆಸಲಾಗುತ್ತಿದೆ. ವಿಜ್ಞಾನದ ಜತೆಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಿಸಲಾಗುತ್ತದೆ. ವಿಜ್ಞಾನ ಮತ್ತು ಸಂಗೀತ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದನ್ನು ಇದು ಸಾಬೀತುಪಡಿಸುತ್ತದೆ ಎಂದರು.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…