ದೇಶ- ವಿದೇಶ

ಕನ್ನಡ ನಾಡು ನುಡಿ ನಮ್ಮ ಹೆಮ್ಮೆ : ಹಾಡಿ ಹೊಗಳಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ ಕೊಂಡಾಡಿದ್ದಾರೆ.

ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘಿಸಿದ ಅವರು, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡರೂ ನಮ್ಮ ಮಕ್ಕಳು ಟೆಕ್‌ವಲ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ ಅವರು ತಮ್ಮ ನೆಲದ ಭಾಷೆ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಎಂಬ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠಶಾಲೆ ಆರಂಭ ಮಾಡಿದರು ಎಂದು ನೆನೆಪಿಸಿದರು.

ಇದನ್ನು ಓದಿ: ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಕನ್ನಡ ಪಾಠಶಾಲೆಯಲ್ಲಿ ಮಕ್ಕಳಿಗೆ ಕನ್ನಡ ಭಾಷೆ ಕಲಿಸುತ್ತಿದ್ದಾರೆ, ಕನ್ನಡ ಓದು, ಬರಹ, ಮಾತನಾಡುವುದು ಕಲಿಸುತ್ತಿದ್ದಾರೆ. ಈಗ ಆ ಪಾಠಶಾಲೆಯಲ್ಲಿ ಒಂದು ಸಾವಿರ ಮಕ್ಕಳಿಗೆ ಕನ್ನಡ ಭಾಷೆ ಕಲಿಸುವ ಕೆಲಸವಾಗುತ್ತಿದೆ. ಈ ಮೂಲಕ ದುಬೈನಲ್ಲಿ ಇರುವ ಕನ್ನಡಿಗರು ಭಾಷಾಭಿಮಾನ ಮೆರೆಯುತ್ತಿದ್ದಾರೆ ಎಂದರು.

ಮನ್‌ಕೀ ಬಾತ್‌ನಲ್ಲಿ ಮೋದಿ ಅವರು, ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ)ಯ ಕಾರ್ಯ ಚಟುವಟಿಕೆಗಳ ಬಗ್ಗೆ ಹೊಗಳಿದ್ದು ವಿಶೇಷವಾಗಿತ್ತು. ಐಐಎಸ್‌ಸಿಯಲ್ಲಿ ಕೇವಲ ವಿಜ್ಞಾನವನ್ನು ಕಲಿಸುವುದು ಮಾತ್ರವಲ್ಲ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸುವ ಸಂಗೀತ ತರಗತಿಗಳನ್ನು ನಡೆಸಲಾಗುತ್ತಿದೆ. ವಿಜ್ಞಾನದ ಜತೆಗೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಿಸಲಾಗುತ್ತದೆ. ವಿಜ್ಞಾನ ಮತ್ತು ಸಂಗೀತ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದನ್ನು ಇದು ಸಾಬೀತುಪಡಿಸುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

2 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

2 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago