ಬೆಂಗಳೂರು: ಲೋಕಸಭಾ ಚುನಾವಣೆ ನಡೆಯುತ್ತಿರುವ ನಡುವೆಯೇ ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ಧರ್ಮಾದಾರಿತ ಜನಸಂಖ್ಯಾ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಸುದ್ದಿಯನ್ನು ಭಿತ್ತರಿಸುವಾಗ ಖಾಸಗಿ ಸುದ್ದಿ ವಾಹಿನಿಯೊಂದು ಮುಸ್ಲಿಂ ಜನಸಂಖ್ಯೆ ಮಾಹಿತಿ ನೀಡಲು ಪಾಕಿಸ್ತಾನ ಧ್ವಜವನ್ನು ಬಳಕೆ ಮಾಡಿರುವುದು ಕಂಡು ಬಂದಿದೆ.
ಕನ್ನಡ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ʼಚರ್ಚಾʼ ಕಾರ್ಯಕ್ರಮದಲ್ಲಿ ಹಿಂದೂ ಜನಸಂಖ್ಯೆಯನ್ನು ಗುರುತಿಸಲು ಭಾರತ ಧ್ವಜ ಹಾಗೂ ಮುಸ್ಲಿಮರ ಜನಸಂಖ್ಯೆ ತಿಳಿಸಲು ಪಾಕಿಸ್ತಾನ ಧ್ವಜ ಬಳಸಿರುವುದು ವರದಿಯಾಗಿದೆ. ಈ ಕಾರ್ಯಕ್ರಮವನ್ನು ಅಜಿತ್ ಹನುಮಕ್ಕನವರ್ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಮುಸ್ಲಿಂರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ ವರದಿ ನೀಡಿದ್ದು, ಈ ವಿಷಯ ಸಂಬಂಧ ದೇಶಾದ್ಯಂತ ವ್ಯಾಪಕ ಚರ್ಚೆ ಕಾರಣವಾಗಿದೆ. ಇನ್ನು ಇದೇ ವಿಷಯ ಸಂಬಂಧ ಕನ್ನಡ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ವರದಿ ಬಿತ್ತರಿಸುವಾಗ ಮುಸ್ಲಿಮರಿಗೆ ಪಾಕಿಸ್ತಾನ ಧ್ವಜ ಬಳಸಿರುವುದು ವರದಿಯಾಗಿದೆ.
ಈ ವರದಿಯನ್ನು ಆಲ್ಟ್ ನ್ಯೂಸ್ ಸಹ ಸಂಪಾದಕ ಮಹಮ್ಮದ್ ಝುಬೇರ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಇಎಸಿ-ಪಿಎಂ” ವರದಿಯನ್ನು ಪ್ರಕಟಿಸುವಾಗ ಪಾಕಿಸ್ತಾನ ಧ್ವಜದೊಂದಿಗೆ ಮುಸ್ಲಿಮರನ್ನು ಚಿತ್ರಿಸಿದ್ದಾರೆ. ಕರ್ನಾಟಕದ ಈ ಚಾನೆಲ್ ಹಾಗೂ ಆಂಕರ್ ವಿರುದ್ಧ ನಾವು ದೂರು ನೀಡಲಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…