ದೇಶ- ವಿದೇಶ

ಚುನಾವಣೆಯಲ್ಲಿ ಸ್ಪರ್ಧಿಸುವಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಚರ್ಚಿಸಬೇಕು: ಕಪಿಲ್‌ ಸಿಬಲ್‌

ನವದೆಹಲಿ: ಇಂಡಿಯಾ ಮೈತ್ರಿಕೂಟದ ಪಕ್ಷಗಳು ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂಬುದನ್ನು ಕುಳಿತು ತೀರ್ಮಾನಿಸಬೇಕು. ಆ ಮಾತ್ರ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಲು ಸಾಧ್ಯ ಎಂದು ಸಂಸದ ಕಪಿಲ್‌ ಸಿಬಲ್‌ ಸಲಹೆ ನೀಡಿದ್ದಾರೆ.

ಇಂದು(ಫೆಬ್ರವರಿ.11) ಇತ್ತೀಚಿನ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೀನಾಯವಾಗಿ ಸೋಲು ಅನುಭವಿಸುತ್ತಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿನ ಗೊಂದಲವೂ ಬಿಜೆಪಿಗೆ ಲಾಭ ಮಾಡಿಕೊಡುತ್ತಿದೆ. ದೇಶದಲ್ಲಿ ಕಾಂಗ್ರೆಸ್‌ ಒಮ್ಮತದಿಂದ ಎಲ್ಲಾ ಪಕ್ಷಗಳನ್ನು ಪ್ರಯತ್ನಿಸುತ್ತದೆ. ಆದರೆ ಇದೇ ನಿರ್ಧಾರ ಕಾಂಗ್ರೆಸ್‌ ಪಕ್ಷ ಕೆಲವೊಂದು ಬಾರಿ ಮುಳುವಾಗುತ್ತದೆ ಎಂದರು.

ಬಿಹಾರದ ಆರ್‌ಜೆಡಿ ವರದಿ ನೀಡಿರುವ ಪ್ರಕಾರ, ಬಿಹಾರ ವಿಧಾನಸಭೆ ಚುನಾವಣೆಯ ವೇಳೆ ನಿರೀಕ್ಷಿಸದ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ನಮ್ಮ ಪಕ್ಷಕ್ಕೆ ಕಾಂಗ್ರೆಸ್‌ನಿಂದಲೇ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹೇಳಿದ್ದರು. ಅಲ್ಲದೇ ಕಾಂಗ್ರೆಸ್‌ ವಿರುದ್ಧ ಗೋವಾ, ಹರಿಯಾಣ, ಗುಜರಾತ್‌ ಹಾಗೂ ಇತರ ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಾಗ ಅರವಿಂದ ಕೇಜ್ರಿವಾಲ್‌ ಅವರಿಗೂ ಇದೇ ರೀತಿ ಪ್ರಶ್ನೆ ಕೇಳಬೇಕಿತ್ತು ಎಂದು ಹೇಳಿದರು.

ಇನ್ನೂ ಉತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ಮೈತ್ರಿ ಯಶಸ್ವಿಯಾಗಿತ್ತು. ತಮಿಳುನಾಡಿನಲ್ಲಿಯೂ ಇದು ಯಶಸ್ಸು ಕಂಡಿತ್ತು. ಹಾಗಾಗಿ ದೇಶದಲ್ಲಿ ಮುಂದಿನ ಚುನಾವಣೆಗಳು ಬಂದಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೇಗೆ ಮುಂದುವರಿಯಬೇಕು ಎಂಬುದನ್ನು ಚರ್ಚಿಸಬೇಕು. ಜೊತೆಗೆ ಚುನಾವಣೆಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಸೇರಿ ಎಲ್ಲರೂ ನಿರ್ಧರಿಸಬೇಕು. ಇಲ್ಲವಾದರೆ ಇದರ ಲಾಭವನ್ನು ಬಿಜೆಪಿ ಪಕ್ಷ ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಸ್ಕೂಟಿ-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸಾವು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್‌ ಬಳಿ ಸ್ಕೂಟಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು…

1 min ago

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ…

29 mins ago

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

2 hours ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

3 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

3 hours ago