ದೇಶ- ವಿದೇಶ

ಚುನಾವಣೆಯಲ್ಲಿ ಸ್ಪರ್ಧಿಸುವಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಚರ್ಚಿಸಬೇಕು: ಕಪಿಲ್‌ ಸಿಬಲ್‌

ನವದೆಹಲಿ: ಇಂಡಿಯಾ ಮೈತ್ರಿಕೂಟದ ಪಕ್ಷಗಳು ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂಬುದನ್ನು ಕುಳಿತು ತೀರ್ಮಾನಿಸಬೇಕು. ಆ ಮಾತ್ರ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಲು ಸಾಧ್ಯ ಎಂದು ಸಂಸದ ಕಪಿಲ್‌ ಸಿಬಲ್‌ ಸಲಹೆ ನೀಡಿದ್ದಾರೆ.

ಇಂದು(ಫೆಬ್ರವರಿ.11) ಇತ್ತೀಚಿನ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೀನಾಯವಾಗಿ ಸೋಲು ಅನುಭವಿಸುತ್ತಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿನ ಗೊಂದಲವೂ ಬಿಜೆಪಿಗೆ ಲಾಭ ಮಾಡಿಕೊಡುತ್ತಿದೆ. ದೇಶದಲ್ಲಿ ಕಾಂಗ್ರೆಸ್‌ ಒಮ್ಮತದಿಂದ ಎಲ್ಲಾ ಪಕ್ಷಗಳನ್ನು ಪ್ರಯತ್ನಿಸುತ್ತದೆ. ಆದರೆ ಇದೇ ನಿರ್ಧಾರ ಕಾಂಗ್ರೆಸ್‌ ಪಕ್ಷ ಕೆಲವೊಂದು ಬಾರಿ ಮುಳುವಾಗುತ್ತದೆ ಎಂದರು.

ಬಿಹಾರದ ಆರ್‌ಜೆಡಿ ವರದಿ ನೀಡಿರುವ ಪ್ರಕಾರ, ಬಿಹಾರ ವಿಧಾನಸಭೆ ಚುನಾವಣೆಯ ವೇಳೆ ನಿರೀಕ್ಷಿಸದ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ನಮ್ಮ ಪಕ್ಷಕ್ಕೆ ಕಾಂಗ್ರೆಸ್‌ನಿಂದಲೇ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹೇಳಿದ್ದರು. ಅಲ್ಲದೇ ಕಾಂಗ್ರೆಸ್‌ ವಿರುದ್ಧ ಗೋವಾ, ಹರಿಯಾಣ, ಗುಜರಾತ್‌ ಹಾಗೂ ಇತರ ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಾಗ ಅರವಿಂದ ಕೇಜ್ರಿವಾಲ್‌ ಅವರಿಗೂ ಇದೇ ರೀತಿ ಪ್ರಶ್ನೆ ಕೇಳಬೇಕಿತ್ತು ಎಂದು ಹೇಳಿದರು.

ಇನ್ನೂ ಉತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ಮೈತ್ರಿ ಯಶಸ್ವಿಯಾಗಿತ್ತು. ತಮಿಳುನಾಡಿನಲ್ಲಿಯೂ ಇದು ಯಶಸ್ಸು ಕಂಡಿತ್ತು. ಹಾಗಾಗಿ ದೇಶದಲ್ಲಿ ಮುಂದಿನ ಚುನಾವಣೆಗಳು ಬಂದಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೇಗೆ ಮುಂದುವರಿಯಬೇಕು ಎಂಬುದನ್ನು ಚರ್ಚಿಸಬೇಕು. ಜೊತೆಗೆ ಚುನಾವಣೆಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಸೇರಿ ಎಲ್ಲರೂ ನಿರ್ಧರಿಸಬೇಕು. ಇಲ್ಲವಾದರೆ ಇದರ ಲಾಭವನ್ನು ಬಿಜೆಪಿ ಪಕ್ಷ ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

2 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

4 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

4 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

4 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

4 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

4 hours ago