ದೇಶ- ವಿದೇಶ

ಚುನಾವಣೆಯಲ್ಲಿ ಸ್ಪರ್ಧಿಸುವಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಚರ್ಚಿಸಬೇಕು: ಕಪಿಲ್‌ ಸಿಬಲ್‌

ನವದೆಹಲಿ: ಇಂಡಿಯಾ ಮೈತ್ರಿಕೂಟದ ಪಕ್ಷಗಳು ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂಬುದನ್ನು ಕುಳಿತು ತೀರ್ಮಾನಿಸಬೇಕು. ಆ ಮಾತ್ರ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಲು ಸಾಧ್ಯ ಎಂದು ಸಂಸದ ಕಪಿಲ್‌ ಸಿಬಲ್‌ ಸಲಹೆ ನೀಡಿದ್ದಾರೆ.

ಇಂದು(ಫೆಬ್ರವರಿ.11) ಇತ್ತೀಚಿನ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೀನಾಯವಾಗಿ ಸೋಲು ಅನುಭವಿಸುತ್ತಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿನ ಗೊಂದಲವೂ ಬಿಜೆಪಿಗೆ ಲಾಭ ಮಾಡಿಕೊಡುತ್ತಿದೆ. ದೇಶದಲ್ಲಿ ಕಾಂಗ್ರೆಸ್‌ ಒಮ್ಮತದಿಂದ ಎಲ್ಲಾ ಪಕ್ಷಗಳನ್ನು ಪ್ರಯತ್ನಿಸುತ್ತದೆ. ಆದರೆ ಇದೇ ನಿರ್ಧಾರ ಕಾಂಗ್ರೆಸ್‌ ಪಕ್ಷ ಕೆಲವೊಂದು ಬಾರಿ ಮುಳುವಾಗುತ್ತದೆ ಎಂದರು.

ಬಿಹಾರದ ಆರ್‌ಜೆಡಿ ವರದಿ ನೀಡಿರುವ ಪ್ರಕಾರ, ಬಿಹಾರ ವಿಧಾನಸಭೆ ಚುನಾವಣೆಯ ವೇಳೆ ನಿರೀಕ್ಷಿಸದ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ನಮ್ಮ ಪಕ್ಷಕ್ಕೆ ಕಾಂಗ್ರೆಸ್‌ನಿಂದಲೇ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹೇಳಿದ್ದರು. ಅಲ್ಲದೇ ಕಾಂಗ್ರೆಸ್‌ ವಿರುದ್ಧ ಗೋವಾ, ಹರಿಯಾಣ, ಗುಜರಾತ್‌ ಹಾಗೂ ಇತರ ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಾಗ ಅರವಿಂದ ಕೇಜ್ರಿವಾಲ್‌ ಅವರಿಗೂ ಇದೇ ರೀತಿ ಪ್ರಶ್ನೆ ಕೇಳಬೇಕಿತ್ತು ಎಂದು ಹೇಳಿದರು.

ಇನ್ನೂ ಉತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ಮೈತ್ರಿ ಯಶಸ್ವಿಯಾಗಿತ್ತು. ತಮಿಳುನಾಡಿನಲ್ಲಿಯೂ ಇದು ಯಶಸ್ಸು ಕಂಡಿತ್ತು. ಹಾಗಾಗಿ ದೇಶದಲ್ಲಿ ಮುಂದಿನ ಚುನಾವಣೆಗಳು ಬಂದಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೇಗೆ ಮುಂದುವರಿಯಬೇಕು ಎಂಬುದನ್ನು ಚರ್ಚಿಸಬೇಕು. ಜೊತೆಗೆ ಚುನಾವಣೆಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಸೇರಿ ಎಲ್ಲರೂ ನಿರ್ಧರಿಸಬೇಕು. ಇಲ್ಲವಾದರೆ ಇದರ ಲಾಭವನ್ನು ಬಿಜೆಪಿ ಪಕ್ಷ ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

15 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

21 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

27 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago