ದೇಶ- ವಿದೇಶ

ಚುನಾವಣೆಯಲ್ಲಿ ಸ್ಪರ್ಧಿಸುವಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಚರ್ಚಿಸಬೇಕು: ಕಪಿಲ್‌ ಸಿಬಲ್‌

ನವದೆಹಲಿ: ಇಂಡಿಯಾ ಮೈತ್ರಿಕೂಟದ ಪಕ್ಷಗಳು ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂಬುದನ್ನು ಕುಳಿತು ತೀರ್ಮಾನಿಸಬೇಕು. ಆ ಮಾತ್ರ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಲು ಸಾಧ್ಯ ಎಂದು ಸಂಸದ ಕಪಿಲ್‌ ಸಿಬಲ್‌ ಸಲಹೆ ನೀಡಿದ್ದಾರೆ.

ಇಂದು(ಫೆಬ್ರವರಿ.11) ಇತ್ತೀಚಿನ ಚುನಾವಣೆಗಳಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೀನಾಯವಾಗಿ ಸೋಲು ಅನುಭವಿಸುತ್ತಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿನ ಗೊಂದಲವೂ ಬಿಜೆಪಿಗೆ ಲಾಭ ಮಾಡಿಕೊಡುತ್ತಿದೆ. ದೇಶದಲ್ಲಿ ಕಾಂಗ್ರೆಸ್‌ ಒಮ್ಮತದಿಂದ ಎಲ್ಲಾ ಪಕ್ಷಗಳನ್ನು ಪ್ರಯತ್ನಿಸುತ್ತದೆ. ಆದರೆ ಇದೇ ನಿರ್ಧಾರ ಕಾಂಗ್ರೆಸ್‌ ಪಕ್ಷ ಕೆಲವೊಂದು ಬಾರಿ ಮುಳುವಾಗುತ್ತದೆ ಎಂದರು.

ಬಿಹಾರದ ಆರ್‌ಜೆಡಿ ವರದಿ ನೀಡಿರುವ ಪ್ರಕಾರ, ಬಿಹಾರ ವಿಧಾನಸಭೆ ಚುನಾವಣೆಯ ವೇಳೆ ನಿರೀಕ್ಷಿಸದ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಹೀಗಾಗಿ ನಮ್ಮ ಪಕ್ಷಕ್ಕೆ ಕಾಂಗ್ರೆಸ್‌ನಿಂದಲೇ ಚುನಾವಣೆಯಲ್ಲಿ ಸೋಲಬೇಕಾಯಿತು ಎಂದು ಹೇಳಿದ್ದರು. ಅಲ್ಲದೇ ಕಾಂಗ್ರೆಸ್‌ ವಿರುದ್ಧ ಗೋವಾ, ಹರಿಯಾಣ, ಗುಜರಾತ್‌ ಹಾಗೂ ಇತರ ಕಡೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದಾಗ ಅರವಿಂದ ಕೇಜ್ರಿವಾಲ್‌ ಅವರಿಗೂ ಇದೇ ರೀತಿ ಪ್ರಶ್ನೆ ಕೇಳಬೇಕಿತ್ತು ಎಂದು ಹೇಳಿದರು.

ಇನ್ನೂ ಉತ್ತರ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷದ ಮೈತ್ರಿ ಯಶಸ್ವಿಯಾಗಿತ್ತು. ತಮಿಳುನಾಡಿನಲ್ಲಿಯೂ ಇದು ಯಶಸ್ಸು ಕಂಡಿತ್ತು. ಹಾಗಾಗಿ ದೇಶದಲ್ಲಿ ಮುಂದಿನ ಚುನಾವಣೆಗಳು ಬಂದಾಗ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೇಗೆ ಮುಂದುವರಿಯಬೇಕು ಎಂಬುದನ್ನು ಚರ್ಚಿಸಬೇಕು. ಜೊತೆಗೆ ಚುನಾವಣೆಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ಸೇರಿ ಎಲ್ಲರೂ ನಿರ್ಧರಿಸಬೇಕು. ಇಲ್ಲವಾದರೆ ಇದರ ಲಾಭವನ್ನು ಬಿಜೆಪಿ ಪಕ್ಷ ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

3 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

10 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

10 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

15 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

15 hours ago