ಕರಾಚಿ(ಪಾಕಿಸ್ತಾನ): ಪಾಕಿಸ್ತಾನದ ಹಲವಾರು ಭಾಗಗಳಲ್ಲಿ ಭೀಕರ ಬಿಸಿಗಾಳಿ ಎದುರಾಗಿದ್ದು, ಬಿಸಿಗಾಳಿಯ ತೀವ್ರತೆಯಿಂದ ಕರಾಚಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ 450ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಎಧಿ ಫೌಂಡೇಶನ್ ಇಂದು(ಜೂ.26) ತಿಳಿಸಿದೆ.
ದೇಶದ ಅತಿದೊಡ್ಡ ನಗರ ಹಾಗೂ ಬಂದರು ನಗರವಾಗಿರುವ ಕರಾಚಿಯಲ್ಲಿ ಶನಿವಾರದಿಂದ(ಜೂ.22) 40ಕ್ಕಿಂತ ಹೆಚ್ಚು ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ದಾಖಲಾಗಿದೆ.
ಕರಾಚಿಯಲ್ಲಿ ಶವಗಳನ್ನು ಇಡಲು ಶವಾಗಾರದಲ್ಲಿ ಜಾಗ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸಾವಿನ ಮತ್ತಷ್ಟು ಹೆಚ್ಚಾಗುತ್ತಿದ್ದು, ಈ ಶವಗಳ ಪೈಕಿ ಹೆಚ್ಚು ತಾಪಮಾನದ ಹೊರತಾಗಿಯೂ, ವಿದ್ಯುತ್ ಆಭಾವ ಎದುರಿಸುತ್ತಿರುವ ಪ್ರದೇಶಗಳಿಂದ ಬಂದ ಶವಗಳೇ ಹೆಚ್ಚು ಎಂಬುದು ಆಘಾತಕಾರಿ ಎಂದು ಎಧಿ ಫೌಂಡೇಶನ್ ಮುಖ್ಯಸ್ಥ ಫೈಸಲ್ ಎಧಿ ತಿಳಿಸಿದ್ದಾರೆ.
ಕರಾಚಿ ಹಾಗೂ ಸಿಂಧ್ ಪ್ರಾಂತ್ಯದಲ್ಲಿ ಗಾಳಿಯ ವೇಗ ಸರಾಸರಿಗಿಂತ ತೀವ್ರವಾಗಿದೆ. ಸರ್ಕಾರ, ನಗರ ಸುತ್ತಮುತ್ತ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸಿದ್ದತೆಗಳನ್ನು ಹೆಚ್ಚಿಸಿದೆ. 77 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಧಿ ಸಂಸ್ಥೆ ತಿಳಿಸಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…