ವಯ್ನಾಡು: ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಪ್ರವಾಸಿಗರು ವಾಪಸ್ ಆಗುತ್ತಿದ್ದ ವೇಳೆ ಕೇರಳದ ವಯನಾಡು ಸಮೀಪದ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್ನಲ್ಲಿದ್ದ 27 ಮಂದಿ ಗಾಯಗೊಂಡಿದ್ದಾರೆ.
ಈ ಅಪಘಾತ ಇಂದು (ನ.19) ಬೆಳಿಗ್ಗೆ 6 ಗಂಟೆಗೆ ಶಬರಿಮಲೆಯಿಂದ ಮೈಸೂರಿನ ಮೂಲಕ ಹುಣಸೂರಿಗೆ ಚಲಿಸುವಾಗ ವಯನಾಡಿನ ಸಮೀಪ ಸಂಭವಿಸಿದ್ದು, ಬಸ್ನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರೆಂದು ಹೇಳಲಾಗಿದೆ. ಅದರಲ್ಲಿ 27 ಮಂದಿ ಗಾಯಾಳುಗಳಾಗಿದ್ದಾರೆ. ಆ ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಸಹ ಇದ್ದು, ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ವಯನಾಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಅಪಘಾತ ಬಗ್ಗೆ ವಯನಾಡು ಕ್ಷೇತದಲ್ಲಿ ಸಂಸದ ಸ್ಥಾನಕ್ಕೆ ಚುನಾವಣಾ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಶಬರಿಮಲೆಗೆ ತೆರಳಿದ್ದ ಕರ್ನಾಟಕ ಭಕ್ತರ ಬಸ್ ವಯನಾಡ್ ಸಮೀಪ ಬಳಿ ಅಪಘಾತಕ್ಕೀಡಾಗಿರುವುದು ನೋವುಂಟು ಮಾಡಿದೆ. ಹೀಗಾಗಿ ಆ ಗಾಯಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…
ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…