ಶಬರಿಮಲೆಯಿಂದ ಬರುತ್ತಿದ್ದ ಕರ್ನಾಟಕದ ಬಸ್‌ ಅಪಘಾತ; 27 ಮಂದಿಗೆ ಗಾಯ

ವಯ್‌ನಾಡು: ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಪ್ರವಾಸಿಗರು ವಾಪಸ್‌ ಆಗುತ್ತಿದ್ದ ವೇಳೆ ಕೇರಳದ ವಯನಾಡು ಸಮೀಪದ ತಿರುವಿನಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ 27 ಮಂದಿ ಗಾಯಗೊಂಡಿದ್ದಾರೆ.

ಈ ಅಪಘಾತ ಇಂದು (ನ.19) ಬೆಳಿಗ್ಗೆ 6 ಗಂಟೆಗೆ ಶಬರಿಮಲೆಯಿಂದ ಮೈಸೂರಿನ ಮೂಲಕ ಹುಣಸೂರಿಗೆ ಚಲಿಸುವಾಗ ವಯನಾಡಿನ ಸಮೀಪ ಸಂಭವಿಸಿದ್ದು, ಬಸ್‌ನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರಿದ್ದರೆಂದು ಹೇಳಲಾಗಿದೆ. ಅದರಲ್ಲಿ 27 ಮಂದಿ ಗಾಯಾಳುಗಳಾಗಿದ್ದಾರೆ. ಆ ಗಾಯಾಳುಗಳಲ್ಲಿ ಇಬ್ಬರು ಮಕ್ಕಳು ಸಹ ಇದ್ದು, ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ವಯನಾಡ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಅಪಘಾತ ಬಗ್ಗೆ ವಯನಾಡು ಕ್ಷೇತದಲ್ಲಿ ಸಂಸದ ಸ್ಥಾನಕ್ಕೆ ಚುನಾವಣಾ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸಂದೇಶವನ್ನು ಹಂಚಿಕೊಂಡಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಶಬರಿಮಲೆಗೆ ತೆರಳಿದ್ದ ಕರ್ನಾಟಕ ಭಕ್ತರ ಬಸ್‌ ವಯನಾಡ್‌ ಸಮೀಪ ಬಳಿ ಅಪಘಾತಕ್ಕೀಡಾಗಿರುವುದು ನೋವುಂಟು ಮಾಡಿದೆ. ಹೀಗಾಗಿ ಆ ಗಾಯಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago