ದೇಶ- ವಿದೇಶ

ಕರ್ನಾಟಕ ಕಾಂಗ್ರೆಸ್‌ ಹೈಕಮಾಂಡ್‌ನ ಎಟಿಎಂ ಆಗಿದೆ ಎಂದ ಶೋಭಾ ಕರಂದ್ಲಾಜೆ

ನವದೆಹಲಿ: ಕರ್ನಾಟಕದಲ್ಲಿ ವಾರಕ್ಕೊಂದು ಹಗರಣ ನಡೆಯುತ್ತಿದ್ದು, ಎಲ್ಲಾ ನಿಗಮಗಳಲ್ಲಿ ಹಣ ಗುಳುಂ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಸೂಚನೆ ಮೇರೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ. ಹಣವನ್ನು ವರ್ಗಾವಣೆ ಮಾಡಿ ಎಲ್ಲಾ ಚುನಾವಣೆಗಳಲ್ಲೂ ಬಳಸಲಾಗಿದೆ. ಸಂವಿಧಾನ ಪುಷ್ತಕ ಹಿಡಿದು ಓಡಾಡುವ ಕಾಂಗ್ರೆಸ್‌ ನಾಯಕರು ಈ ರೀತಿ ಮಾಡಿದರೆ ಹೇಗೆ ಎಂದು ಕಿಡಿಕಾರಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜ್ಯದ ಅಭಿವೃದ್ಧಿ ಹಾಗೂ ಜನತೆಯ ರಕ್ಷಣೆ ಬಗ್ಗೆ ಯೋಚನೆ ಮಾಡುತ್ತಿಲ್ಲ. ಕಾಂಗ್ರೆಸ್‌ ಸರ್ಕಾರ ಬರೀ ಭ್ರಷ್ಟಾಚಾರದಲ್ಲಿ ತೊಡಗಿದೆ. ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಹಗರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಇನ್ನೂ ವಾಲ್ಮೀಕಿ ಹಗರಣ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಸೂಚನೆ ಮೇರೆಗೆ ಹಣ ವರ್ಗಾವಣೆಯಾಗಿದೆ. ಎಲ್ಲಾ ಹಗರಣಗಳ ತನಿಖೆ ಮುಗಿಯುವವರೆಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago