ತುಮಕೂರು: ಮಹಾರಾಷ್ಟ್ರ ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲವೆಂದು ಸುಳ್ಳು ಜಾಹೀರಾತು ನೀಡಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು (ನ.19) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಸೂಚನೆ ನೀಡಿದ್ದು, ಆ ಪಕ್ಷದ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಈ ಆದೇಶದ ಮೇರೆಗೆ ಇನ್ನೊಮ್ಮೆ ಜಾಹೀರಾತನ್ನು ಪರಿಶೀಲಿಸಿ ಮಾನನಷ್ಟ ಮೊಕದ್ದಮೆ ಕೇಸ್ನ್ನು ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಮಹಾರಾಷ್ಟ್ರದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿಯು ಚುನಾವಣಾ ಪ್ರಚಾರದ ವೇಳೆ ಕರ್ನಾಟಕ ರಾಜ್ಯದ ಪಂಚ ಗ್ಯಾರಂಟಿಗಳನ್ನು ಸುಳ್ಳು ಗ್ಯಾರಂಟಿಗಳು ಎಂದು ಜಾಹೀರಾತು ನೀಡಿತ್ತು. ಅಲ್ಲದೇ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ಜಾರಿಗೊಳಿಸಿಲ್ಲ. ಕೇವಲ ಕಾಂಗ್ರೆಸ್ ಸರ್ಕಾರ ಆ ರಾಜ್ಯದಲ್ಲಿ ಸುಳ್ಳು ಹೇಳುತ್ತಿದೆ ಎಂದು ಘೋಷಿಸಿತ್ತು. ಹೀಗಾಗಿ ಮಹಾರಾಷ್ಟ್ರದ ಸರ್ಕಾರ ಜಾಹೀರಾತು ನೀಡಿ ರಾಜ್ಯ ಸರ್ಕಾರವನ್ನು ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ವಿರುದ್ಧ ಕಾನೂನು ಕ್ರಮವನ್ನು ಜಾರಿಗೊಳಿಸಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…