ದೇಶ- ವಿದೇಶ

ಆಂಧ್ರಪ್ರದೇಶಕ್ಕೆ 9 ಆನೆಗಳನ್ನು ಕಳುಹಿಸಿಕೊಡಲಿದೆ ರಾಜ್ಯ ಸರ್ಕಾರ: ಯಾಕೆ ಗೊತ್ತಾ?

ಬೆಂಗಳೂರು: ನಲ್ಲಮಲ್ಲ ಮೀಸಲು ಅರಣ್ಯ ಪ್ರದೇಶದಲ್ಲಿನ ಕಾಡು ಪ್ರಾಣಿಗಳು, ಪರಿಸರ ಸಂರಕ್ಷಣೆಯ ಹಿತದೃಷ್ಠಿಯಿಂದಾಗಿ ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 9 ತರಬೇತಿ ಪಡೆದ ಆನೆಗಳನ್ನು ಕಳುಹಿಸಿಕೊಡಲು ರಾಜ್ಯ ಅರಣ್ಯ ಇಲಾಖೆ ಸಮ್ಮತಿಸಿದೆ.

ಆಂಧ್ರ ಅರಣ್ಯ ಇಲಾಖೆ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿನ ಬೆಲೆಬಾಳುವ ಅಪರೂಪದ ಪ್ರಭೇದಗಳು, ಮರಗಳು, ಪ್ರಾಣಿಗಳ ಸಂರಕ್ಷಣೆಗಾಗಿ ರೇಂಜರ್‌, ಮುಷ್ಕರ ಪಡೆಗಳು, ನೌಕರರು ಹಾಗೂ ಕಳ್ಳಬೇಟೆ ನಿಗ್ರಹ ದಳಗಳನ್ನು ಆಯೋಜಿಸಿದೆ. ಇದರ ಜೊತೆಗೆ ರಾಜ್ಯದಲ್ಲಿ ತರಬೇತಿ ಪಡೆದ 9 ಆನೆಗಳನ್ನು ಕಾರ್ಯಾಚರಣೆಗಾಗಿ ಬಳಸಲು ಅವರು ಮನವಿ ಮಾಡಿದ್ದಾರೆ.

ಕಳ್ಳ ಮಾರ್ಗಗಳ ಮೂಲಕ ಅಕ್ರಮ ಚಟುವಟಿಕೆಗಳನ್ನು ಮಾಡುತ್ತಿರುವ ಕಳ್ಳ ಸಾಗಾಣೆದಾರರು ಹಾಗೂ ಬೇಟೆಗಾರರನ್ನು ಸೆರೆಹಿಡಿಯಲು ಅಗತ್ಯ ನವೀನ ತಂತ್ರಜ್ಞಾನ ಬಳಸಿದ್ದರೂ ಸಹಾ ಬೇಟೆಗಾರರು ತಮ್ಮ ಕೆಲಸಗಳನ್ನು ಮುಂದುವರೆಸುತ್ತಿದ್ದಾರೆ. ಹೀಗಾಗಿ ಅರಣ್ಯ ಸಂಪತ್ತನ್ನು ಸಂರಕ್ಷಿಸಲು ತರಬೇತಿ ಪಡೆದ ಆನೆಗಳನ್ನು ನಿಯೋಜಿಸಿ ಅಕ್ರಮ ತಡೆಗಟ್ಟಲು ಆಂಧ್ರಪ್ರದೇಶ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯದಿಂದ ತರಬೇತಿ ಪಡೆದ ಆನೆಗಳನ್ನು ಕಳುಹಿಸಿಕೊಡುವಂತೆ ಕೋರಿದ್ದರು.

ಇನ್ನು ಈ ಮನವಿಗೆ ಸ್ಪಂದಿಸಿದ ರಾಜ್ಯ ಅರಣ್ಯ ಇಲಾಖೆ ತರಬೇತಿ ಪಡೆದ 9 ಆನೆಗಳನ್ನು ಕಳುಹಿಸಿಕೊಡಲು ಸಮ್ಮತಿಸಿದ್ದಾರೆ. ಮತ್ತು ತರಬೇತಿ ಪಡೆದ ಆನೆಗಳನ್ನು ಮುನ್ನಡೆಸಲು ಮಾವುತ ಹಾಗೂ ಸಹಚರರಿಗೆ ತರಬೇತಿ ನೀಡುವ ಬಗ್ಗೆ ಹಾಗೂ ಆನೆಗಳ ಆಹಾರ ಪದ್ದತಿ, ಚಲನವಲನ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವ ಬಗ್ಗೆ ತರಬೇತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಪೆದ್ದ ದೋರ್ನಾಳ ಅರಣ್ಯ ವಲಯಾಧಿಕಾರಿ ವಿಶ್ವೇಶ್ವರ ರಾವ್‌ ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

38 mins ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

42 mins ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

5 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

5 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

5 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

5 hours ago