ದೇಶ- ವಿದೇಶ

ಪಹಲ್ಗಾಮ್‌ ದಾಳಿ : ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು ನೀಡುತ್ತಿರುವ ಸಚಿವ ಸಂತೋಷ್‌ ಲಾಡ್‌

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್‌ ಲಾಡ್‌ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.

ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಸಂತೋಷ್‌ ಲಾಡ್‌ ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಕ್ರಮ:-
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

3 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

3 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

3 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

12 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago