ದೇಶ- ವಿದೇಶ

ಪಹಲ್ಗಾಮ್‌ ದಾಳಿ : ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು ನೀಡುತ್ತಿರುವ ಸಚಿವ ಸಂತೋಷ್‌ ಲಾಡ್‌

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್‌ ಲಾಡ್‌ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.

ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಸಂತೋಷ್‌ ಲಾಡ್‌ ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಕ್ರಮ:-
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

7 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

9 hours ago