ದೇಶ- ವಿದೇಶ

ಪಹಲ್ಗಾಮ್‌ ದಾಳಿ : ಕಾಶ್ಮೀರದಲ್ಲಿ ಕನ್ನಡಿಗರಿಗೆ ನೆರವು ನೀಡುತ್ತಿರುವ ಸಚಿವ ಸಂತೋಷ್‌ ಲಾಡ್‌

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಸಚಿವ ಸಂತೋಷ್‌ ಲಾಡ್‌ ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ನೆರವಾಗಿದ್ದಾರೆ.

ಮೃತದೇಹಗಳು ನಿಮ್ಮ ಸಂಬಂಧಿಕರೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ ಎಂದು ಸಂತೋಷ್‌ ಲಾಡ್‌ ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಕ್ರಮ:-
ಕರ್ನಾಟಕ ಸರ್ಕಾರವು ಕಾಶ್ಮೀರದಲ್ಲಿ ಸಿಕ್ಕಿರುವ ಕನ್ನಡಿಗರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದು, ಅವರಿಗೆ ಸೂಕ್ತ ಮಾಹಿತಿ ಮತ್ತು ಭರವಸೆ ನೀಡುತ್ತಿದೆ. ರಾಜ್ಯದಲ್ಲಿ 24/7 ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಕಾಶ್ಮೀರದ ಘಟನೆಯಿಂದ ಪ್ರಭಾವಿತರಾದ ಕುಟುಂಬಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸರ್ಕಾರ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

3 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

8 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

8 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

8 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

8 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

8 hours ago